ಆಡಳಿತಾಧಿಕಾರಿ ಸೂಚನೆಗೆ ಕಿಮ್ಮತ್ತಿಲ್ಲ
ದೇವನಹಳ್ಳಿ ಪುರಸಭೆಯಲ್ಲಿ ಈಚೆಗೆ ನಡೆದ ಸದಸ್ಯರ ಸಮಾಲೋಚನೆ ಸಭೆಯಲ್ಲಿ ರಸ್ತೆಗೆ ಅಡ್ಡಲಾಗಿ ಅಂಗಡಿಗಳನ್ನು ಇಟ್ಟುಕೊಳ್ಳುವವರನ್ನು ತೆರವು ಮಾಡಿ ಇಂದಿರಾ ಕ್ಯಾಂಟಿನ್ ಪಕ್ಕದಲ್ಲಿರುವ ಎಪಿಎಂಸಿ ಮಾರಟ ಕಟ್ಟೆಗಳಲ್ಲಿ ಅವಕಾಶ ಕಲ್ಪಿಸಿಕೊಡಲು ಸೂಚಿಸಲಾಗಿತ್ತು. ಸಂಚಾರ ದಟ್ಟಣೆಯಾಗದಂತೆ ತಡೆಯುವಂತೆ ಅಧಿಕಾರಿಗಳು ಸೂಚಿಸಿದ್ದರೂ ಅವರ ಮಾತಿಗೆ ಕಿಮ್ಮತ್ತಿಲ್ಲದಂತಾಗಿದೆ. ಗಮನ ಹರಿಸದ ಸಂಚಾರಿ ಪೊಲೀಸರು ದೇವನಹಳ್ಳಿಯಲ್ಲಿರುವ ಸಂಚಾರಿ ಪೊಲೀಸರು ಬೆಂಗಳೂರು ನಗರ ಪೊಲೀಸ್ ಇಲಾಖೆಯ ಅಡಿಯಲ್ಲಿ ಕೆಲಸ ಮಾಡುತ್ತಿದ್ದು ವಿಮಾನ ನಿಲ್ದಾಣ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ಮಾತ್ರವೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ದೇವನಹಳ್ಳಿ ಹಳೇ ಪಟ್ಟಣ ಭಾಗದಲ್ಲಿ ಅಷ್ಟಾಗಿ ಗಮನ ಹರಿಸದ ಕಾರಣದಿಂದಾಗಿ ಇಲ್ಲಿ ನಿಯಮ ಉಲ್ಲಂಘಿಸಿದರೂ ಯಾರು ಕೇಳದಂತಾಗಿದೆ ಎಂಬುದು ಸಾರ್ವಜನಿಕರ ಆರೋಪ.