ಸೂಲಿಬೆಲೆ: ಪಟ್ಟಣದ ಬಸ್ನಿಲ್ದಾಣ ಪ್ರಯಾಣಿಕರ ತಂಗುದಾಣವು ಕುಡುಕರ, ಭಿಕ್ಷುಕರ ಹಾಗೂ ಪ್ರಾಣಿಗಳ ವಾಸ ಸ್ಥಾನವಾಗಿದೆ. ಇದರಿಂದ ತೀವ್ರ ಸಮಸ್ಯೆಯಾಗುತ್ತಿದೆ ಎಂದು ನಾಗರಿಕರು ದೂರಿದ್ದಾರೆ.
ಸುತ್ತಮುತ್ತಲಿನ ಗ್ರಾಮಗಳಿಂದ ದಿನನಿತ್ಯ ಸಾವಿರಾರು ಪ್ರಯಾಣಿಕರು ನಗರ ಪ್ರದೇಶಗಳಿಗೆ ಹೋಗಲು ಸೂಲಿಬೆಲೆ ಹೋಬಳಿ ಕೇಂದ್ರಕ್ಕೆ ಬಂದು ಹೋಗುತ್ತಾರೆ. ಪಟ್ಟಣದ ಹೊಸ ಬಸ್ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಎರಡು ತಂಗುದಾಣಗಳನ್ನು ನಿರ್ಮಿಸಲಾಗಿದೆ. ಆದರೆ, ಇವುಗಳು ಅವ್ಯವಸ್ಥೆಯ ಆಗರವಾಗಿವೆ.
ಕೂಡಲೇ ಬಸ್ನಿಲ್ದಾಣವನ್ನು ಪ್ರಯಾಣಿಕರಿಗೆ ಬಳಕೆಯಾಗುವ ರೀತಿಯಲ್ಲಿ ಸ್ವಚ್ಛಗೊಳಿಸಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ವಕೀಲ ನರಸಿಂಹಮೂರ್ತಿ ಮನವಿ ಮಾಡಿದ್ದಾರೆ.