ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ವಿವಾದ: ಹಲ್ಲೆಗೆ ಒಳಗಾಗಿದ್ದ ವೈ.ನಾಗರಾಜ್‌ ಸಾವು

Last Updated 19 ನವೆಂಬರ್ 2019, 13:53 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹಲ್ಲೆಗೆ ಒಳಗಾಗಿದ್ದ ಗುಮ್ಮನಹಳ್ಳಿ ಗ್ರಾಮದ ವೈ.ನಾಗರಾಜ್ (50) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಹಲ್ಲೆಗೆ ಒಳಗಾದ ವ್ಯಕ್ತಿಯ ಸಂಬಂಧಿಗಳು ದೂರು ನೀಡಿದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

‘ನ. 7ರಂದು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೈ.ನಾಗರಾಜ್ ಹಾಗೂ ಕೆಂಪೇಗೌಡ ಎಂಬುವವರ ನಡುವೆ ಜಗಳ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಗುಮ್ಮನಹಳ್ಳಿ ಗ್ರಾಮದವರೇ ಆದ ಕೆಂಪೇಗೌಡ ಹಾಗೂ ಆತನ ಮಗ ವಿಜಯಕುಮಾರ್ ಎಂಬುವವರು ಹಲ್ಲೆ ನಡೆಸಿದ ಕಾರಣ ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಆರೋಪಿಗಳನ್ನು ಬಂಧಿಸಿಲ್ಲ’ ಎಂದು ಗ್ರಾಮಸ್ಥರು ಆರೋಪಿಸಿದರು.

ಸೋಮವಾರ ರಾತ್ರಿ 2 ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಗರಾಜ್ ಸಾವನಪ್ಪಿದ ವಿಷಯ ಗ್ರಾಮದಲ್ಲಿ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಗಳನ್ನು ಬಂಧಿಸದೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸರ್ಕಲ್‍ ಇನ್‌ಸ್ಪೆಕ್ಟರ್ ರಾಘವ ಎಸ್.ಗೌಡ, ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ ನಂತರ ಪರಿಸ್ಥಿತಿ ತಿಳಿಗೊಂಡಿದೆ. ಹಲ್ಲೆ ನಡೆಸಿ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT