<p><strong>ಆನೇಕಲ್: </strong>ತಾಲ್ಲೂಕಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದರೋಡೆ ಮತ್ತಿತರ ಪ್ರಕರಣಗಳಲ್ಲಿ ಭಾಗಿಗಳಾಗಿದ್ದ 23 ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹15.25 ಲಕ್ಷ ನಗದು, 20 ಬೈಕ್, ಚಿನ್ನದ ಆಭರಣಗಳು, ಮೊಬೈಲ್ ವಶಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ವಲಯ ಐಜಿಪಿ ಸೀಮಂತ್ಕುಮಾರ್ ಸಿಂಗ್ ತಿಳಿಸಿದರು.</p>.<p>ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ ಆಭರಣ ಮತ್ತಿತರ ವಸ್ತುಗಳನ್ನು ವಾರಸುದಾರರಿಗೆ ವಿತರಿಸಿ ಅವರು ಮಾತನಾಡಿದರು.</p>.<p>ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹15 ಲಕ್ಷ ನಗದು, ಎರಡು ಕಾರು, ಮೂರು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಪ್ರಭುದೇವ್, ಕಿರಣ್ ರಾವ್, ಶಿವ, ಜಿಮ್ ಮೂರ್ತಿ, ರೋಹಿತ್, ದಿಲೀಪ್ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿ ತಲೆ ಮರೆಸಿಕೊಂಡಿದ್ದಾರೆ.</p>.<p>ಬನ್ನೇರುಘಟ್ಟ ಠಾಣೆ ವ್ಯಾಪ್ತಿಯಲ್ಲಿ ಐಷಾರಾಮಿ ಜೀವನ ನಡೆಸಲು ಆರೋಪಿಗಳು ಬೈಕ್ಗಳನ್ನು ಕಳವು ಮಾಡುತ್ತಿದ್ದರು. ಇಲ್ಲಿ ಸಿಕ್ಕಿಬಿದ್ದ ಮೂವರು ಆರೋಪಿಗಳಿಂದ 3 ರಾಯಲ್ ಎನ್ಫೀಲ್ಡ್ ಬೈಕ್ಗಳು, ಎರಡು ಬಜಾಜ್ ಪಲ್ಸರ್, ಆರು ಸ್ಕೂಟರ್ಗಳು ಸೇರಿದಂತೆ ಒಟ್ಟು 11 ದ್ವಿಚಕ್ರ ವಾಹನಗಳು, ಒಂದು ಕಾರು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಕಾರ್ತೀಕ್, ಜಯಂತ್, ಕಿಶೋರ್ ಎಂದು ಗುರುತಿಸಲಾಗಿದ್ದು ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.<p>ಜಿಗಣಿ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ದರೋಡೆ ಮಾಡುತ್ತಿದ್ದ ಸಂತೋಷ್, ರಾಜೇಶ್, ಪವನ್, ಶ್ರೀಧರ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹ 25 ಸಾವಿರ ನಗದು, ನಾಲ್ಕು ಬೈಕ್ ವಶಪಡಿಸಿಕೊಳ್ಳಲಾಗಿದೆ. ರಂಜಿತ್ ಎಂಬ ಮೊಬೈಲ್ ಕಳ್ಳನನ್ನು ಬಂಧಿಸಿ 23 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ಒಂಟಿ ಮನೆಗಳ ಒಳಗಡೆ ನುಗ್ಗಿ ಮತ್ತು ಜನರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಮೂರು ಮಂದಿ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹ 4 ಲಕ್ಷ ಬೆಲೆ ಬಾಳುವ ಚಿನ್ನದ ಆಭರಣಗಳು, ಒಂದು ಮೊಬೈಲ್, ಒಂದು ಆಟೋ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹೀಲಲಿಗೆ ಮನೋಜ್ ಕುಮಾರ್, ಬೊಮ್ಮಸಂದ್ರದ ಚೇತನ್ ಮತ್ತು ಗೋಪಾಲ ಎಂದು ಗುರುತಿಸಲಾಗಿದೆ.</p>.<p>ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಉಮಾಶಂಕರ್ ಮತ್ತು ಜಗದೀಶ್ ಎಂಬ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹1.20 ಲಕ್ಷ ಬೆಲೆ ಬಾಳುವ ತಾಮ್ರದ ತಂತಿ ವಶಪಡಿಸಿಕೊಳ್ಳಲಾಗಿದೆ. ಕುಮಾರ್, ಯೋಗೀಶ್ ಮತ್ತು ರಕ್ಷಿತ್ ಎಂಬ ಬೈಕ್ ಕಳ್ಳರನ್ನು ಬಂಧಿಸಿ ಆರೋಪಿಗಳಿಂದ ಐದು ದ್ವಿಚಕ್ರ ವಾಹನಮತ್ತು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದ್ದು 9 ಲಕ್ಷ ಬೆಲೆ ಬಾಳುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಬಾಲಕರಾಗಿದ್ದು ಬಾಲನ್ಯಾಯಮಂಡಳಿ ಆದೇಶದಂತೆ ನ್ಯಾಯಮಂಡಳಿಯ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣನವರ್, ಡಿವೈಎಸ್ಪಿಗಳಾದ ನಂಜುಂಡೇಗೌಡ, ಎಚ್.ಎಂ.ಮಹದೇವಪ್ಪ, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಶೇಖರ್, ಕೆ.ವಿಶ್ವನಾಥ್, ಸತೀಶ್, ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದರೋಡೆ ಮತ್ತಿತರ ಪ್ರಕರಣಗಳಲ್ಲಿ ಭಾಗಿಗಳಾಗಿದ್ದ 23 ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹15.25 ಲಕ್ಷ ನಗದು, 20 ಬೈಕ್, ಚಿನ್ನದ ಆಭರಣಗಳು, ಮೊಬೈಲ್ ವಶಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ವಲಯ ಐಜಿಪಿ ಸೀಮಂತ್ಕುಮಾರ್ ಸಿಂಗ್ ತಿಳಿಸಿದರು.</p>.<p>ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ ಆಭರಣ ಮತ್ತಿತರ ವಸ್ತುಗಳನ್ನು ವಾರಸುದಾರರಿಗೆ ವಿತರಿಸಿ ಅವರು ಮಾತನಾಡಿದರು.</p>.<p>ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹15 ಲಕ್ಷ ನಗದು, ಎರಡು ಕಾರು, ಮೂರು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಪ್ರಭುದೇವ್, ಕಿರಣ್ ರಾವ್, ಶಿವ, ಜಿಮ್ ಮೂರ್ತಿ, ರೋಹಿತ್, ದಿಲೀಪ್ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿ ತಲೆ ಮರೆಸಿಕೊಂಡಿದ್ದಾರೆ.</p>.<p>ಬನ್ನೇರುಘಟ್ಟ ಠಾಣೆ ವ್ಯಾಪ್ತಿಯಲ್ಲಿ ಐಷಾರಾಮಿ ಜೀವನ ನಡೆಸಲು ಆರೋಪಿಗಳು ಬೈಕ್ಗಳನ್ನು ಕಳವು ಮಾಡುತ್ತಿದ್ದರು. ಇಲ್ಲಿ ಸಿಕ್ಕಿಬಿದ್ದ ಮೂವರು ಆರೋಪಿಗಳಿಂದ 3 ರಾಯಲ್ ಎನ್ಫೀಲ್ಡ್ ಬೈಕ್ಗಳು, ಎರಡು ಬಜಾಜ್ ಪಲ್ಸರ್, ಆರು ಸ್ಕೂಟರ್ಗಳು ಸೇರಿದಂತೆ ಒಟ್ಟು 11 ದ್ವಿಚಕ್ರ ವಾಹನಗಳು, ಒಂದು ಕಾರು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಕಾರ್ತೀಕ್, ಜಯಂತ್, ಕಿಶೋರ್ ಎಂದು ಗುರುತಿಸಲಾಗಿದ್ದು ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.<p>ಜಿಗಣಿ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ದರೋಡೆ ಮಾಡುತ್ತಿದ್ದ ಸಂತೋಷ್, ರಾಜೇಶ್, ಪವನ್, ಶ್ರೀಧರ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹ 25 ಸಾವಿರ ನಗದು, ನಾಲ್ಕು ಬೈಕ್ ವಶಪಡಿಸಿಕೊಳ್ಳಲಾಗಿದೆ. ರಂಜಿತ್ ಎಂಬ ಮೊಬೈಲ್ ಕಳ್ಳನನ್ನು ಬಂಧಿಸಿ 23 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ವೇಳೆಯಲ್ಲಿ ಒಂಟಿ ಮನೆಗಳ ಒಳಗಡೆ ನುಗ್ಗಿ ಮತ್ತು ಜನರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ ಮೂರು ಮಂದಿ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹ 4 ಲಕ್ಷ ಬೆಲೆ ಬಾಳುವ ಚಿನ್ನದ ಆಭರಣಗಳು, ಒಂದು ಮೊಬೈಲ್, ಒಂದು ಆಟೋ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಹೀಲಲಿಗೆ ಮನೋಜ್ ಕುಮಾರ್, ಬೊಮ್ಮಸಂದ್ರದ ಚೇತನ್ ಮತ್ತು ಗೋಪಾಲ ಎಂದು ಗುರುತಿಸಲಾಗಿದೆ.</p>.<p>ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಉಮಾಶಂಕರ್ ಮತ್ತು ಜಗದೀಶ್ ಎಂಬ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ₹1.20 ಲಕ್ಷ ಬೆಲೆ ಬಾಳುವ ತಾಮ್ರದ ತಂತಿ ವಶಪಡಿಸಿಕೊಳ್ಳಲಾಗಿದೆ. ಕುಮಾರ್, ಯೋಗೀಶ್ ಮತ್ತು ರಕ್ಷಿತ್ ಎಂಬ ಬೈಕ್ ಕಳ್ಳರನ್ನು ಬಂಧಿಸಿ ಆರೋಪಿಗಳಿಂದ ಐದು ದ್ವಿಚಕ್ರ ವಾಹನಮತ್ತು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದ್ದು 9 ಲಕ್ಷ ಬೆಲೆ ಬಾಳುವ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಬಾಲಕರಾಗಿದ್ದು ಬಾಲನ್ಯಾಯಮಂಡಳಿ ಆದೇಶದಂತೆ ನ್ಯಾಯಮಂಡಳಿಯ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ.ಚನ್ನಣ್ಣನವರ್, ಡಿವೈಎಸ್ಪಿಗಳಾದ ನಂಜುಂಡೇಗೌಡ, ಎಚ್.ಎಂ.ಮಹದೇವಪ್ಪ, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಶೇಖರ್, ಕೆ.ವಿಶ್ವನಾಥ್, ಸತೀಶ್, ನಾಗರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>