<p><strong>ದೇವನಹಳ್ಳಿ:</strong> ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಸಮಾಲೋಚನೆ ಸೇವೆ ಕಲ್ಪಿಸಬೇಕಾಗಿದೆ. ಸಖಿ ಯೋಜನೆಯಡಿ ತೃತೀಯ ಲಿಂಗಿಗಳಿಗೂ ರಕ್ಷಣೆ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ‘ಸಖಿ- ಒನ್ ಸ್ಟಾಪ್ ಸೆಂಟರ್’ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರದ ಅನುದಾನಿತ ಸಖಿ -ಓ.ಎಸ್ ಸಿ ಯೋಜನೆ ಪ್ರಮುಖ ಉದ್ದೇಶ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರಿಗೆ ಒಂದೇ ಸೂರಿನಡಿ ಎಲ್ಲ ರೀತಿಯ ತುರ್ತುಚಿಕಿತ್ಸೆ ಮತ್ತು ಮನೋಸ್ಥೈರ್ಯ ತುಂಬುವುದು ಇದರ ಪ್ರಮುಖ ಉದ್ದೇಶ ಎಂದರು.</p>.<p>ಸಖಿ ಕೇಂದ್ರಕ್ಕೆ ಅಗತ್ಯವಿರುವ ಸಮಾಲೋಚಕರ ಒಂದು ಹುದ್ದೆ ಹಾಗೂ ಸಮಾಜ ಸೇವಾ ಕಾರ್ಯಕರ್ತ- ಮೂರು ಹುದ್ದೆಗೆ ನಿಯಮಾನುಸಾರ ಭರ್ತಿ ಮಾಡಲಾಗುವುದು ಎಂದರು.</p>.<p>ಸಭೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಡಿ.ವೈ.ಎಸ್.ಪಿ ಟಿ.ರಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಕ ಜಿ.ರಾಯ್ಕರ್, ಸ್ವಯಂಸೇವಾ ಸಂಸ್ಥೆಗಳ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಸಮಾಲೋಚನೆ ಸೇವೆ ಕಲ್ಪಿಸಬೇಕಾಗಿದೆ. ಸಖಿ ಯೋಜನೆಯಡಿ ತೃತೀಯ ಲಿಂಗಿಗಳಿಗೂ ರಕ್ಷಣೆ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ‘ಸಖಿ- ಒನ್ ಸ್ಟಾಪ್ ಸೆಂಟರ್’ ಜಿಲ್ಲಾ ಮಟ್ಟದ ಟಾಸ್ಕ್ಫೋರ್ಸ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರದ ಅನುದಾನಿತ ಸಖಿ -ಓ.ಎಸ್ ಸಿ ಯೋಜನೆ ಪ್ರಮುಖ ಉದ್ದೇಶ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರಿಗೆ ಒಂದೇ ಸೂರಿನಡಿ ಎಲ್ಲ ರೀತಿಯ ತುರ್ತುಚಿಕಿತ್ಸೆ ಮತ್ತು ಮನೋಸ್ಥೈರ್ಯ ತುಂಬುವುದು ಇದರ ಪ್ರಮುಖ ಉದ್ದೇಶ ಎಂದರು.</p>.<p>ಸಖಿ ಕೇಂದ್ರಕ್ಕೆ ಅಗತ್ಯವಿರುವ ಸಮಾಲೋಚಕರ ಒಂದು ಹುದ್ದೆ ಹಾಗೂ ಸಮಾಜ ಸೇವಾ ಕಾರ್ಯಕರ್ತ- ಮೂರು ಹುದ್ದೆಗೆ ನಿಯಮಾನುಸಾರ ಭರ್ತಿ ಮಾಡಲಾಗುವುದು ಎಂದರು.</p>.<p>ಸಭೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಡಿ.ವೈ.ಎಸ್.ಪಿ ಟಿ.ರಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಕ ಜಿ.ರಾಯ್ಕರ್, ಸ್ವಯಂಸೇವಾ ಸಂಸ್ಥೆಗಳ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>