ಪೊಲೀಸರ ಭರವಸೆ: ದ್ವಿತೀಯ ಪಿಯು ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ತೊಂದರೆಯಾಗಲಿದೆ ಎನ್ನುವ ಕಾರಣದಿಂದ ಬಸ್ಗಳನ್ನು ಡಿಪೊದಿಂದ ಹೊರ ಹೋಗಲು ಅವಕಾಶ ನೀಡುವಂತೆ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳನ್ನು ಕರೆಸಿ ಇಲ್ಲಿನ ಸಮಸ್ಯೆಗಳ ಕುರಿತು ಸಭೆ ನಡೆಸುವ ಬಗ್ಗೆ ಸಬ್ಇನ್ಸ್ಪೆಕ್ಟರ್ ನೀಡಿದ ಭರವಸೆಯಂತೆ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ. ಭಾನುವಾರದೊಳಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸದಿದ್ದರೆ ಮತ್ತೆ ಬಸ್ಗಳನ್ನು ತಡೆಯಲಾಗುವುದು ಎಂದು ರಘುನಂದನ್, ಚಂದ್ರು, ಮುನಿರಾಜು,ರಘು, ವಿಲ್ಸೊನ್ ಬಾಬು,ರವಿ ಎಚ್ಚರಿಸಿದರು.