ಮುಖಂಡ ಅಶೋಕ್ ಮಾತನಾಡಿ, ‘ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಬೆಂಬಲ ಬೆಲೆಯನ್ನು ನಿಲ್ಲಿಸಿರುವುದು ಸೇರಿದಂತೆ ಹಲವಾರು ರೈತವಿರೋಧಿ ಕಾಯ್ದೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದರಿಂದಾಗಿ ರೈತರ ಭೂಮಿ ಬಂಡವಾಳಶಾಹಿ ಪಾಲಾಗುತ್ತಿದೆ. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಹಾಗಾಗಿ ಎಲ್ಲರೂ ಒಗ್ಗೂಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಸಂದೇಶವನ್ನು ರವಾನಿಸಬೇಕಾಗಿದೆ’ ಎಂದರು.