ಈ ಸಂದರ್ಭದಲ್ಲಿ ಮಾತನಾಡಿದ ಬೆಸ್ಕಾಂ ಸಹಾಯಕ ಇಂಜಿಯರ್ ಶ್ರೀನಿವಾಸ್, ‘ಬೆಸ್ಕಾಂನ್ನು ಖಾಸಗೀಕರಣ ಮಾಡಿದರೆ ಪ್ರಸ್ತುತ ಸರ್ಕಾರ ನೀಡುತ್ತಿರುವ ಪ್ರತಿಯೊಂದು ಸೌಲಭ್ಯಗಳು ಸಿಗುವುದಿಲ್ಲ. ರೈತರಿಗೆ ಉಚಿತ ಸೌಲಭ್ಯಗಳು ಇರುವುದಿಲ್ಲ. ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಬಡವರಿಗೆ ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ಕಡಿವಾಣ ಬೀಳಲಿದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸುವ ಕೊಳವೆ ಬಾವಿಗಳಿಗೆ ಬೆಸ್ಕಾಂನಿಂದ ವಿದ್ಯುತ್ ಕಂಬಗಳು ಮತ್ತು ಇತರ ಪರಿಕರ ಉಚಿತವಾಗಿ ನೀಡಿ ಕೊಳವೆ ಬಾವಿಗೆ ಸಂಪರ್ಕ ವ್ಯವಸ್ಥೆ ಮಾಡುತ್ತಿದ್ದು ಅದು ಸಹ ತಪ್ಪಿ ಹೋಗಲಿದೆ. ಕೇಂದ್ರ ಸರ್ಕಾರ ಈಗಾಗಲೇ ಕೆಲವು ರಾಜ್ಯಗಳಲ್ಲಿ ಖಾಸಗಿಕರಣ ಮಾಡಿರುವುದರಿಂದ ರೈತರು ಮತ್ತು ಸಾರ್ವಜನಿಕರು ಶೋಷಣೆಗೆ ಒಳಗಾಗುತ್ತಿದ್ದಾರೆ’ ಎಂದು ದೂರಿದರು.