ಗ್ರಾಮದ ಮುಖಂಡ ನಾರಾಯಣಸ್ವಾಮಿ ಮಾತನಾಡಿ, ‘ಅವೈಜ್ಞಾನಿಕವಾಗಿ ನೀರಿನ ಪೈಪ್ಲೈನ್ ಕಾಮಗಾರಿ ನಡೆಸಲಾಗಿದೆ. ಅದನ್ನೂ ಅರ್ಧ ನಡೆಸಿ ಒಂದು ವರ್ಷ ಕಳೆದಿದ್ದರೂ ಪೂರ್ಣಗೊಳಿಸಿಲ್ಲ. ಮುಂಗಾರಿನಲ್ಲಿ ಕೆರೆಯಲ್ಲಿ ಸಂಗ್ರಹವಾಗಿದ್ದ ಮಳೆ ನೀರನ್ನೇ ದಿನಬಳಕೆಗೆ, ಕುಡಿಯುವುದಕ್ಕೆ ಬಳಸಲಾಗುತ್ತಿತ್ತು. ಈಗ ಕೆರೆಯಲ್ಲಿ ಹನಿ ನೀರಿಲ್ಲ’ ಎಂದರು.