ಇಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮೊಳಕಾಲ್ಮುರಿನಿಂದ ಶ್ರೀರಾಮುಲು ಎದುರು ಕಾಂಗ್ರೆಸ್ ಯುವ ಘಟಕದ ಸಾಮಾನ್ಯ ಕಾರ್ಯಕರ್ತ ಯೋಗೇಶ್ ಬಾಬುಗೆ ಟಿಕೆಟ್ ಕೊಟ್ಟು, ‘ಟಾಂಗ್’ ನೀಡಲಾಗಿದೆ. ಇಲ್ಲಿ ಕಾಂಗ್ರೆಸ್ ಅಲೆ ಎದ್ದಿದ್ದು, ಸೋಲುವ ಭಯದಿಂದ ಬಾದಾಮಿಯಲ್ಲೂ ಸ್ಪರ್ಧೆ ಮಾಡಲು ಶ್ರೀರಾಮುಲು ಹೋಗಿದ್ದಾರೆ. ಅವರು ಎರಡೂ ಕ್ಷೇತ್ರಗಳಲ್ಲಿ ಸೋಲಲಿದ್ದಾರೆ’ ಎಂದು ಭವಿಷ್ಯ ನುಡಿದರು.