ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಗನಿಗೇ ಟಿಕೆಟ್‌ ಕೊಡಿಸಲು ಆಗದವರು ಸಿ.ಎಂ ಆಗ್ತಾರಾ?’

Last Updated 25 ಏಪ್ರಿಲ್ 2018, 14:48 IST
ಅಕ್ಷರ ಗಾತ್ರ

ಮೊಳಕಾಲ್ಮುರು: ‘ವರುಣಾ ಕ್ಷೇತ್ರದಲ್ಲಿ ಮಗನಿಗೇ ಬಿಜೆಪಿ ಟಿಕೆಟ್‌ ಕೊಡಿಸಲು ಆಗದ ಯಡಿಯೂರಪ್ಪ ಸಿ.ಎಂ ಆಗ್ತಾರಾ’ ಎಂದು ಸಚಿವ ಡಿ.ಕೆ. ಶಿವಕುಮಾರ್‌ ವ್ಯಂಗ್ಯವಾಡಿದರು.

ಇಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮೊಳಕಾಲ್ಮುರಿನಿಂದ ಶ್ರೀರಾಮುಲು ಎದುರು ಕಾಂಗ್ರೆಸ್‌ ಯುವ ಘಟಕದ ಸಾಮಾನ್ಯ ಕಾರ್ಯಕರ್ತ ಯೋಗೇಶ್‌ ಬಾಬುಗೆ ಟಿಕೆಟ್‌ ಕೊಟ್ಟು, ‘ಟಾಂಗ್‌’ ನೀಡಲಾಗಿದೆ. ಇಲ್ಲಿ ಕಾಂಗ್ರೆಸ್‌ ಅಲೆ ಎದ್ದಿದ್ದು, ಸೋಲುವ ಭಯದಿಂದ ಬಾದಾಮಿಯಲ್ಲೂ ಸ್ಪರ್ಧೆ ಮಾಡಲು ಶ್ರೀರಾಮುಲು ಹೋಗಿದ್ದಾರೆ. ಅವರು ಎರಡೂ ಕ್ಷೇತ್ರಗಳಲ್ಲಿ ಸೋಲಲಿದ್ದಾರೆ’ ಎಂದು ಭವಿಷ್ಯ ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT