ಪ್ರತಿಭಟನಕಾರರಿಗೆ ಉತ್ತರಿಸಿದ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕಿ ಸೌಮ್ಯ ‘ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಆಗದೆ ಇರುವುದು, ಬ್ಯಾಂಕ್ ಖಾತೆ ಚಾಲನೆಯಲ್ಲಿ ಇಲ್ಲದೇ ಇರುವ ಕಾರಣ ಕೆಲ ನೇಕಾರರಿಗೆ ಯೋಜನೆಯ ಹಣ ಪಾವತಿಯಾಗಿಲ್ಲ. ನೇಕಾರರು ಕೆಲಸ ಕಾರ್ಯ ಬಿಟ್ಟಿ ಕಚೇರಿಗೆ ಬರುವುದನ್ನು ತಪ್ಪಿಸಲು ಪ್ರತಿ ವಾರ್ಡ್ಗಳಿಗೆ ತೆರಳಿ ಯೋಜನೆ ತಲುಪದೆ ಇರುವ ನೇಕಾರರ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.