ಈ ಸಂದರ್ಭದಲ್ಲಿ ಮಾತನಾಡಿದ ಅಂಗನವಾಡಿ, ಬಿಸಿಯೂಟ ತಯಾರಕರು ಮತ್ತು ಆಶಾ ಕಾರ್ಯಕರ್ತೆಯರ ಸಂಘಟನೆಗಳ ಜಂಟಿ ಸಮಿತಿ ತಾಲ್ಲೂಕು ಘಟಕ ಕಾರ್ಯದರ್ಶಿ ಪುಷ್ಪಾವತಿ, ‘ರಾಜ್ಯದಲ್ಲಿ ಕೋವಿಡ್ 19 ಸೋಂಕು ಕಡಿವಾಣದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರು, ಹಾಲಿ ಗೌರವಧನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾದ ದುಃಸ್ಥಿತಿ ಇದ್ದರೂ ನಾಲ್ಕಾರು ತಿಂಗಳ ವೇತನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಬಿಸಿಯೂಟ ತಯಾರಿಕರಿಗೆ ಈವರೆಗೆ ಬಿಡುಗಡೆಯಾಗಿಲ್ಲ. ಸೋಂಕಿನಿಂದ ಸುರಕ್ಷತೆಗಾಗಿ ಜೀವ ರಕ್ಷಕ ಸಾಧನೆಗಳ ಕೊರತೆಯಿಂದ ಮರಣ ಹೊಂದುತ್ತಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಲ್ಲಿಯೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.