<p><strong>ದೇವನಹಳ್ಳಿ: </strong>ಹೊಸಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಅವರನ್ನು ಹುಡುಕಿಕೊಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇಲ್ಲಿನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕು ಆರೋಗ್ಯಧಿಕಾರಿ ಮಂಜುನಾಥ್ ಡಿ.9 ರಂದು ದಿನವಹಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿರುವ ಪತ್ರವನ್ನು ಜಿಲ್ಲಾಧಿಕಾರಿಗೆ ನೀಡಿರುತ್ತಾರೆ. ಪತ್ರ ಡಿ.11ರಂದು ಅನಧಿಕೃತವಾಗಿ ₹10ಲಕ್ಷ ಮೌಲ್ಯದ ಆಲೋಪತಿ ಔಷಧಿಗಳನ್ನು ಸುಜಾತಾ ಕ್ಲಿನಿಕ್ನಲ್ಲಿ ಸಂಗ್ರಹಿಸಿರುತ್ತಾರೆ ಎಂಬ ದೂರಿನನ್ವಯ ಅವರ ವಿರುದ್ಧ ತಕ್ಷಣ ಜಿಲ್ಲಾ ಆರೋಗ್ಯಾಧಿಕಾರಿ ಕೆ.ಮಂಜುಳಾ ಅವರಿಗೆ ಸೂಕ್ತಕ್ರಮ ಜರುಗಿಸುವಂತೆ ಅದೇಶ ನೀಡಿದ್ದರು.</p>.<p>ಜಿಲ್ಲಾ ಆರೋಗ್ಯಧಿಕಾರಿ ಡಾ. ಮಂಜುಳಾದೇವಿ ಸುಜಾತ ಕ್ಲಿನಿಕ್ನಲ್ಲಿದ್ದ ಅಕ್ರಮ ಔಷಧಿಗಳನ್ನು ವಶಕ್ಕೆ ಪಡೆದು ಕ್ಲಿನಿಕ್ ಮುಚ್ಚುವಂತೆ ಸೂಚಿಸಿರುತ್ತಾರೆ. ಈ ಘಟನೆ ನಡೆದ ಹಿನ್ನಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ದೂರಿದರು.</p>.<p>ಆಶಾ ಕಾರ್ಯಕರ್ತೆಯರಾದ ಲಕ್ಷ್ಮಮ್ಮ, ಅಂಬಿಕಾ, ಮರಿಯಂ ಮಾತನಾಡಿ, ಡಾ.ಮಂಜುನಾಥ್ ಒಬ್ಬ ದಕ್ಷ ಅಧಿಕಾರಿ. ಅವರು ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆ, ಹೇಗಿದ್ದಾರೆ ಮತ್ತು ಏನಾಗಿದೆ ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ತಾಲ್ಲೂಕು ಆರೋಗ್ಯಾಧಿಕಾರಿ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ. ವೈಯಕ್ತಿಕ ಕಾರಣಕ್ಕಾಗಿ ರಜೆ ಹಾಕಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ಹೊಸಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಅವರನ್ನು ಹುಡುಕಿಕೊಡುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇಲ್ಲಿನ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕು ಆರೋಗ್ಯಧಿಕಾರಿ ಮಂಜುನಾಥ್ ಡಿ.9 ರಂದು ದಿನವಹಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿರುವ ಪತ್ರವನ್ನು ಜಿಲ್ಲಾಧಿಕಾರಿಗೆ ನೀಡಿರುತ್ತಾರೆ. ಪತ್ರ ಡಿ.11ರಂದು ಅನಧಿಕೃತವಾಗಿ ₹10ಲಕ್ಷ ಮೌಲ್ಯದ ಆಲೋಪತಿ ಔಷಧಿಗಳನ್ನು ಸುಜಾತಾ ಕ್ಲಿನಿಕ್ನಲ್ಲಿ ಸಂಗ್ರಹಿಸಿರುತ್ತಾರೆ ಎಂಬ ದೂರಿನನ್ವಯ ಅವರ ವಿರುದ್ಧ ತಕ್ಷಣ ಜಿಲ್ಲಾ ಆರೋಗ್ಯಾಧಿಕಾರಿ ಕೆ.ಮಂಜುಳಾ ಅವರಿಗೆ ಸೂಕ್ತಕ್ರಮ ಜರುಗಿಸುವಂತೆ ಅದೇಶ ನೀಡಿದ್ದರು.</p>.<p>ಜಿಲ್ಲಾ ಆರೋಗ್ಯಧಿಕಾರಿ ಡಾ. ಮಂಜುಳಾದೇವಿ ಸುಜಾತ ಕ್ಲಿನಿಕ್ನಲ್ಲಿದ್ದ ಅಕ್ರಮ ಔಷಧಿಗಳನ್ನು ವಶಕ್ಕೆ ಪಡೆದು ಕ್ಲಿನಿಕ್ ಮುಚ್ಚುವಂತೆ ಸೂಚಿಸಿರುತ್ತಾರೆ. ಈ ಘಟನೆ ನಡೆದ ಹಿನ್ನಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ್ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ದೂರಿದರು.</p>.<p>ಆಶಾ ಕಾರ್ಯಕರ್ತೆಯರಾದ ಲಕ್ಷ್ಮಮ್ಮ, ಅಂಬಿಕಾ, ಮರಿಯಂ ಮಾತನಾಡಿ, ಡಾ.ಮಂಜುನಾಥ್ ಒಬ್ಬ ದಕ್ಷ ಅಧಿಕಾರಿ. ಅವರು ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆ, ಹೇಗಿದ್ದಾರೆ ಮತ್ತು ಏನಾಗಿದೆ ಎಂಬುದು ತಿಳಿಯುತ್ತಿಲ್ಲ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ತಾಲ್ಲೂಕು ಆರೋಗ್ಯಾಧಿಕಾರಿ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ. ವೈಯಕ್ತಿಕ ಕಾರಣಕ್ಕಾಗಿ ರಜೆ ಹಾಕಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>