<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಬಾಶೆಟ್ಟಿಯಲ್ಲಿ ಅಜಾಕ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ನಿರ್ಮಾಣಕ್ಕೆ ಶಾಸಕ ಧೀರಜ್ ಮುನಿರಾಜು ಹಾಗೂ ಅಜಾಕ್ಸ್ ಟ್ರಸ್ಟ್ ಅಧ್ಯಕ್ಷ ಕೆ.ವಿಜಯ್ ಗುರುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಅಜಾಕ್ಸ್ ಕಂಪನಿಯು ಅನೇಕ ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದೆ. ಈಗಾಗಲೇ ಬಾಶೆಟ್ಟಿಯಲ್ಲಿ ಅಜಾಕ್ಸ್ ಕಂಪನಿಯು ₹8 ಕೋಟಿ ವೆಚ್ಚದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ ನಿರ್ಮಿಸಿಕೊಟ್ಟಿದೆ. ಇಲ್ಲಿನ ಸೌಲಭ್ಯಗಳಿಗೆ ಮನಸೋತಿರುವ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಇದೇ ಶಾಲೆಗೆ ದಾಖಲು ಮಾಡಿದ್ದಾರೆ ಎಂದರು.</p>.<p>ಅಜಾಕ್ಸ್ ಕಂಪನಿಯ ಸಿಎಸ್ ಅಧಿಕಾರಿ ಸಿ.ಮಜುನಾಥ್, ನೂತನ ಪಿಯು ಕಾಲೇಜಿನಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಳು ಒಳಗೊಂಡಿದ್ದು, ಸುಸಜ್ಜಿತ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಹೊಂದಿರಲಿದೆ. ಮುಂದಿನ ಶಿಕ್ಷಣಿಕ ವರ್ಷದಿಂದ ತರಗತಿಗಳು ಆರಂಭವಾಗಲಿವೆ ಎಂದರು.</p>.<p>ಡಿಡಿಪಿಐ ಬೈಲ ಆಂಜನಪ್ಪ, ಪಿಯುಸಿ ವಿಭಾಗದ ಡಿಡಿ ಮೋಹನ್ಕುಮಾರ್ ಹಾಗೂ ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಬಾಶೆಟ್ಟಿಯಲ್ಲಿ ಅಜಾಕ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ನಿರ್ಮಾಣಕ್ಕೆ ಶಾಸಕ ಧೀರಜ್ ಮುನಿರಾಜು ಹಾಗೂ ಅಜಾಕ್ಸ್ ಟ್ರಸ್ಟ್ ಅಧ್ಯಕ್ಷ ಕೆ.ವಿಜಯ್ ಗುರುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಅಜಾಕ್ಸ್ ಕಂಪನಿಯು ಅನೇಕ ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದೆ. ಈಗಾಗಲೇ ಬಾಶೆಟ್ಟಿಯಲ್ಲಿ ಅಜಾಕ್ಸ್ ಕಂಪನಿಯು ₹8 ಕೋಟಿ ವೆಚ್ಚದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ ನಿರ್ಮಿಸಿಕೊಟ್ಟಿದೆ. ಇಲ್ಲಿನ ಸೌಲಭ್ಯಗಳಿಗೆ ಮನಸೋತಿರುವ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಇದೇ ಶಾಲೆಗೆ ದಾಖಲು ಮಾಡಿದ್ದಾರೆ ಎಂದರು.</p>.<p>ಅಜಾಕ್ಸ್ ಕಂಪನಿಯ ಸಿಎಸ್ ಅಧಿಕಾರಿ ಸಿ.ಮಜುನಾಥ್, ನೂತನ ಪಿಯು ಕಾಲೇಜಿನಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಳು ಒಳಗೊಂಡಿದ್ದು, ಸುಸಜ್ಜಿತ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಹೊಂದಿರಲಿದೆ. ಮುಂದಿನ ಶಿಕ್ಷಣಿಕ ವರ್ಷದಿಂದ ತರಗತಿಗಳು ಆರಂಭವಾಗಲಿವೆ ಎಂದರು.</p>.<p>ಡಿಡಿಪಿಐ ಬೈಲ ಆಂಜನಪ್ಪ, ಪಿಯುಸಿ ವಿಭಾಗದ ಡಿಡಿ ಮೋಹನ್ಕುಮಾರ್ ಹಾಗೂ ಸ್ಥಳೀಯ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>