ಪುರುಷೋತ್ತಮ್ ನಮ್ಮ ಪಕ್ಷದಲ್ಲಿ ಕಾರ್ಯಕರ್ತನಾಗಿದ್ದರು. ನಮ್ಮ ಪಕ್ಷದಿಂದ ಇವರಿಗೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಆದರೂ ಪುರುಷೋತ್ತಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ದೊಡ್ಡಬಳ್ಳಾಪುರ ಸುತ್ತಮುತ್ತ ದೊಡ್ಡಬ್ಯಾನರ್ ಮತ್ತು ಪೋಸ್ಟರ್ಗಳನ್ನುಹಾಕಿಸುತ್ತಿದ್ದಾರೆ. ಬಹುಜನ ಸಮಾಜ ಪಕ್ಷ ರಾಷ್ಟ್ರೀಯ ಪಕ್ಷವಾಗಿದ್ದು, ಇವರು ಪಕ್ಷದ ಶಿಸ್ತಿಗೆ ಬದ್ಧರಾಗಿಲ್ಲ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಪುರುಷೋತ್ತಮ್ ಅವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.