<p><strong>ಆನೇಕಲ್: </strong>ಬಂಜರು ಭೂಮಿ ಎಂದು ನೀವು ಸರ್ಕಾರಕ್ಕೆ ವರದಿ ನೀಡಿದ್ದೀರಿ. ಆ ಬಂಜರು ಭೂಮಿಯಲ್ಲಿಯೇ ನಾವು ಸಮೃದ್ಧ ರಾಗಿ ಬೆಳೆದ್ದೇವೆ ನೋಡಿ... </p>.<p>ತಮ್ಮ ಹೊಲದಲ್ಲಿ ಬೆಳೆದ ರಾಗಿ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಮೇಡಹಳ್ಳಿ ಗ್ರಾಮದ ಪ್ರಗತಿಪರ ರೈತ ಮುರುಗೇಶ್ ಅವರು ಸರ್ಕಾರಿ ಅಧಿಕಾರಿಗಳಿಗೆ ನೀಡಿದ ಮೌನ ಮಾರುತ್ತರವಿದು! </p>.<p>ಆನೇಕಲ್ ತಾಲೂಕಿನ ಫಲವತ್ತಾದ ಕೃಷಿ ಭೂಮಿಗಳನ್ನು ಬಂಜರು ಭೂಮಿಗಳು ಎಂದು ವರದಿ ನೀಡಿರುವ ಅಧಿಕಾರಿಗಳಿಗೆ ಅವರು ತಮ್ಮ ಸಮೃದ್ಧ ರಾಗಿ ಬೆಳೆ ರಾಶಿ ಮೂಲಕ ತಿರುಗೇಟು ನೀಡಿದ್ದಾರೆ. ತಾಲ್ಲೂಕಿನ ಭೂಮಿ ಬಂಜರು ಅಲ್ಲ. ಫಲವತ್ತಾದ ಹಸಿರು ಭೂಮಿ ಎಂಬ ಸಂದೇಶ ರವಾನಿಸಿದ್ದಾರೆ. </p>.<p>ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಡಹಳ್ಳಿಯ ಮುರುಗೇಶ್ ಅವರಿಗೆ ಈ ಬಾರಿ ಉತ್ತಮ ಫಸಲು ಬಂದಿದೆ. ರಾಗಿಕಣ ಮತ್ತು ಗೋಪೂಜೆ ಮೂಲಕ ತಾಲ್ಲೂಕಿನ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾದ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ. </p>.<p>ಅಪಾರ್ಟ್ಮೆಂಟ್, ವಿಲ್ಲಾ, ಲೇಔಟ್ಗಳಿಂದ ಆನೇಕಲ್ ತಾಲ್ಲೂಕಿನ ಬಹುತೇಕ ಭೂಮಿ ಶ್ರೀಮಂತರು ಹಾಗೂ ಬಂಡವಾಳಗಾರರ ಪಾಲಾಗಿದೆ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲ್ಲೂಕಿನ ಭೂಮಿ ಬಂಜರು ಭೂಮಿ ಎಂದು ವರದಿ ನೀಡಿದ್ದಾರೆ.</p>.<p>ಈ ಅಧಿಕಾರಿಗಳ ವರದಿಯನ್ನು ವಿರೋಧಿಸುವ ಸಲುವಾಗಿ ರಾಗಿ ಕಣದ ಪೂಜೆಯನ್ನು ನಡೆಸಲಾಗಿದೆ. ಈ ಮೂಲಕ ಅಧಿಕಾರಿಗಳ ಕಣ್ಣು ತೆರೆಸುವ ಪ್ರಯತ್ನ ಮಾಡಲಾಗಿದೆ ಎಂದು ಮುರುಗೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಬಂಜರು ಭೂಮಿ ಎಂದು ನೀವು ಸರ್ಕಾರಕ್ಕೆ ವರದಿ ನೀಡಿದ್ದೀರಿ. ಆ ಬಂಜರು ಭೂಮಿಯಲ್ಲಿಯೇ ನಾವು ಸಮೃದ್ಧ ರಾಗಿ ಬೆಳೆದ್ದೇವೆ ನೋಡಿ... </p>.<p>ತಮ್ಮ ಹೊಲದಲ್ಲಿ ಬೆಳೆದ ರಾಗಿ ರಾಶಿಗೆ ಪೂಜೆ ಸಲ್ಲಿಸುವ ಮೂಲಕ ಮೇಡಹಳ್ಳಿ ಗ್ರಾಮದ ಪ್ರಗತಿಪರ ರೈತ ಮುರುಗೇಶ್ ಅವರು ಸರ್ಕಾರಿ ಅಧಿಕಾರಿಗಳಿಗೆ ನೀಡಿದ ಮೌನ ಮಾರುತ್ತರವಿದು! </p>.<p>ಆನೇಕಲ್ ತಾಲೂಕಿನ ಫಲವತ್ತಾದ ಕೃಷಿ ಭೂಮಿಗಳನ್ನು ಬಂಜರು ಭೂಮಿಗಳು ಎಂದು ವರದಿ ನೀಡಿರುವ ಅಧಿಕಾರಿಗಳಿಗೆ ಅವರು ತಮ್ಮ ಸಮೃದ್ಧ ರಾಗಿ ಬೆಳೆ ರಾಶಿ ಮೂಲಕ ತಿರುಗೇಟು ನೀಡಿದ್ದಾರೆ. ತಾಲ್ಲೂಕಿನ ಭೂಮಿ ಬಂಜರು ಅಲ್ಲ. ಫಲವತ್ತಾದ ಹಸಿರು ಭೂಮಿ ಎಂಬ ಸಂದೇಶ ರವಾನಿಸಿದ್ದಾರೆ. </p>.<p>ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಡಹಳ್ಳಿಯ ಮುರುಗೇಶ್ ಅವರಿಗೆ ಈ ಬಾರಿ ಉತ್ತಮ ಫಸಲು ಬಂದಿದೆ. ರಾಗಿಕಣ ಮತ್ತು ಗೋಪೂಜೆ ಮೂಲಕ ತಾಲ್ಲೂಕಿನ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾದ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ. </p>.<p>ಅಪಾರ್ಟ್ಮೆಂಟ್, ವಿಲ್ಲಾ, ಲೇಔಟ್ಗಳಿಂದ ಆನೇಕಲ್ ತಾಲ್ಲೂಕಿನ ಬಹುತೇಕ ಭೂಮಿ ಶ್ರೀಮಂತರು ಹಾಗೂ ಬಂಡವಾಳಗಾರರ ಪಾಲಾಗಿದೆ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲ್ಲೂಕಿನ ಭೂಮಿ ಬಂಜರು ಭೂಮಿ ಎಂದು ವರದಿ ನೀಡಿದ್ದಾರೆ.</p>.<p>ಈ ಅಧಿಕಾರಿಗಳ ವರದಿಯನ್ನು ವಿರೋಧಿಸುವ ಸಲುವಾಗಿ ರಾಗಿ ಕಣದ ಪೂಜೆಯನ್ನು ನಡೆಸಲಾಗಿದೆ. ಈ ಮೂಲಕ ಅಧಿಕಾರಿಗಳ ಕಣ್ಣು ತೆರೆಸುವ ಪ್ರಯತ್ನ ಮಾಡಲಾಗಿದೆ ಎಂದು ಮುರುಗೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>