<p><strong>ವಿಜಯಪುರ (ದೇವನಹಳ್ಳಿ): </strong>ಇಲ್ಲಿನ ಪುರಸಭೆ ಆವರಣದಲ್ಲಿ ಶುಕ್ರವಾರ ಪುರಸಭೆ ಮತ್ತು ಆರೋಗ್ಯ ಇಲಾಖೆಯಿಂದ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.</p>.<p>ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭ ಅಧ್ಯಕ್ಷೆ ಭವ್ಯ ಮಹೇಶ್, ಪಟ್ಟಣದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಬೇಕು. ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು. ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.</p>.<p>ಪೌರಕಾರ್ಮಿಕರು ತಮ್ಮ ವೃತ್ತಿಯನ್ನು ಮಕ್ಕಳಿಗೂ ಮುಂದುವರೆಸದೆ ಅವರನ್ನು ವಿದ್ಯಾವಂತರನ್ನಾಗಿ ಮಾಡಿ, ವೃತ್ತಿಯ ಬಗ್ಗೆ ಕೀಳಿರಿಮೆ ಬೇಡ. ಯಾವುದೇ ವೃತ್ತಿಯನ್ನು ಗೌರವಿಸಬೇಕು ಎಂದರು.</p>.<p>ಪಟ್ಟಣದ ಜನತೆ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಮನೆಯಲ್ಲಿಯೇ ಹಸಿಕಸ, ಒಣಕಸವನ್ನು ಬೇರ್ಪಡಿಸಿ ಮನೆ ಬಳಿ ಬರುವ ಪುರಸಭೆ ವಾಹನಕ್ಕೆ ನೀಡಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದರು.</p>.<p>ಪೌರಕಾರ್ಮಿಕರು ಕೆಲಸದ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಪುರಸಭೆ ಸದಸ್ಯ ನಂದಕುಮಾರ್ ತಿಳಿಸಿದರು.</p>.<p>ಶಿಬಿರದಲ್ಲಿ 100ಕ್ಕೂ ಹೆಚ್ಚು ಪೌರಕಾರ್ಮಿಕ ಕುಟುಂಬದವರು ತಪಾಸಣೆಗೆ ಒಳಗಾದರು.</p>.<p>ಪುರಸಭೆ ಆರೋಗ್ಯ ಅಧಿಕಾರಿ ಲಾವಣ್ಯ, ವೈದ್ಯರಾದ ಡಾ.ರಾಜು, ಡಾ.ಭೀಮರಾವ್, ಡಾ.ರಾಕೇಶ್, ಡಾ.ವರ್ಷಿಣಿ, ಸುಮಾ, ಅಶ್ವಿನಿ, ನಯನಾ, ಕಲಾವತಿ, ವೀಣಾ, ದುರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಇಲ್ಲಿನ ಪುರಸಭೆ ಆವರಣದಲ್ಲಿ ಶುಕ್ರವಾರ ಪುರಸಭೆ ಮತ್ತು ಆರೋಗ್ಯ ಇಲಾಖೆಯಿಂದ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.</p>.<p>ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭ ಅಧ್ಯಕ್ಷೆ ಭವ್ಯ ಮಹೇಶ್, ಪಟ್ಟಣದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರು ತಮ್ಮ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಬೇಕು. ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು. ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.</p>.<p>ಪೌರಕಾರ್ಮಿಕರು ತಮ್ಮ ವೃತ್ತಿಯನ್ನು ಮಕ್ಕಳಿಗೂ ಮುಂದುವರೆಸದೆ ಅವರನ್ನು ವಿದ್ಯಾವಂತರನ್ನಾಗಿ ಮಾಡಿ, ವೃತ್ತಿಯ ಬಗ್ಗೆ ಕೀಳಿರಿಮೆ ಬೇಡ. ಯಾವುದೇ ವೃತ್ತಿಯನ್ನು ಗೌರವಿಸಬೇಕು ಎಂದರು.</p>.<p>ಪಟ್ಟಣದ ಜನತೆ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಮನೆಯಲ್ಲಿಯೇ ಹಸಿಕಸ, ಒಣಕಸವನ್ನು ಬೇರ್ಪಡಿಸಿ ಮನೆ ಬಳಿ ಬರುವ ಪುರಸಭೆ ವಾಹನಕ್ಕೆ ನೀಡಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದರು.</p>.<p>ಪೌರಕಾರ್ಮಿಕರು ಕೆಲಸದ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಪುರಸಭೆ ಸದಸ್ಯ ನಂದಕುಮಾರ್ ತಿಳಿಸಿದರು.</p>.<p>ಶಿಬಿರದಲ್ಲಿ 100ಕ್ಕೂ ಹೆಚ್ಚು ಪೌರಕಾರ್ಮಿಕ ಕುಟುಂಬದವರು ತಪಾಸಣೆಗೆ ಒಳಗಾದರು.</p>.<p>ಪುರಸಭೆ ಆರೋಗ್ಯ ಅಧಿಕಾರಿ ಲಾವಣ್ಯ, ವೈದ್ಯರಾದ ಡಾ.ರಾಜು, ಡಾ.ಭೀಮರಾವ್, ಡಾ.ರಾಕೇಶ್, ಡಾ.ವರ್ಷಿಣಿ, ಸುಮಾ, ಅಶ್ವಿನಿ, ನಯನಾ, ಕಲಾವತಿ, ವೀಣಾ, ದುರ್ಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>