ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವಸತಿ ಪ್ರದೇಶಕ್ಕೆ ಮಳೆ ನೀರು

Last Updated 21 ನವೆಂಬರ್ 2021, 4:48 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನಾದ್ಯಂತ ಒಂದು ವಾರದಿಂದ ಸುರಿಯುತ್ತಿರುವ ಮಳೆ ಶನಿವಾರವೂ ಮುಂದುವರೆದಿದೆ. ಬಹುತೇಕ ಕೆರೆಗಳು ಭರ್ತಿಯಾಗಿ ಕೋಡಿ ಹರಿಯುತ್ತಿದೆ.

ದೇವನಹಳ್ಳಿಡಿ.ವಿ.ಎಂ ಕಾಲೊನಿಯಲ್ಲಿ ನಾಗರಾಜು ಎಂಬುವವರ ಮನೆ ಕುಸಿದುಬಿದ್ದಿದೆ. ಮನೆ ಕುಸಿದು ಬೀಳುವ ಮುನ್ಸೂಚನೆ ಅರಿತ ಕುಟುಂಬ ಸದಸ್ಯರು ತಕ್ಷಣ ಮನೆಯಿಂದ ಹೊರಗೆ ಬಂದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಪಟ್ಟಣದ ಅಕ್ಕುಪೇಟೆ ಮತ್ತು ಕೋಡಿಮಂಚೇನಹಳ್ಳಿ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಸುತ್ತಮುತ್ತಲಿನಲ್ಲಿ ಮನೆ ಕಟ್ಟಿಕೊಂಡು ವಾಸವಾಗಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಕೆಲ ಮನೆಗಳ ಮೇಲ್ಛಾವಣಿ ಸೋರಿಕೆಯಾಗುತ್ತಿದ್ದು ಮಹಿಳೆಯರು, ಮಕ್ಕಳು, ರಾತ್ರಿಯಿಡೀ ನಿದ್ದೆಯಿಲ್ಲದೆ ಜಾಗರಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೋಡಿಮಂಚೇನಹಳ್ಳಿ ಕೆರೆ ಪಕ್ಕದ ನಾಗಮ್ಮ ಎಂಬುವರ ಮನೆ ಜಲಾವೃತತಗೊಂಡಿದೆ. ಅಕ್ಕುಪೇಟೆ ಮತ್ತು ಬೊಮ್ಮವಾರಕ್ಕೆ ಹೋಗುವ ರೈಲ್ವೆ ಅಂಡರ್ ಪಾಸ್ ಜಲಾವೃತಗೊಂಡಿದೆ. ಅಂಡರ್ ಪಾಸ್‌ನಲ್ಲಿ 10ಕ್ಕೂ ಹೆಚ್ಚು ಅಡಿ ನೀರು ನಿಂತಿದೆ. ಹಲವು ಬಡಾವಣೆಗಳ ರಸ್ತೆ ಸಂಪರ್ಕಕಡಿತಗೊಂಡಿದೆ.

ವಿಜಯಪುರ ಗೋಣೂರು ಕೆರೆ ಕೋಡಿ ತುಂಬಿ ಗ್ರಾಮದೊಳಗೆ ನೀರು ನುಗ್ಗಿದೆ.

ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ವ್ಯಾಪ್ತಿ ದೇವಗಾನಹಳ್ಳಿ ಡಿ.ರಾಮಕೃಷ್ಣಪ್ಪ ಎಂಬುವವರ ಮನೆ ಗೋಡೆ ಕುಸಿದಿದೆ. ಮೇಲ್ಘಾವಣಿ ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದೆ.

ವಿಜಯಪುರ ಹೋಬಳಿ ಗೋಣೂರು ಗ್ರಾಮದ ಕೆರೆ ಕೋಡಿ ಹರಿದು ನೀರು ಗ್ರಾಮಕ್ಕೆ ನುಗ್ಗಿದೆ. ರಾಗಿಹೊಲಗಳಲ್ಲಿ ನೀರು ನಿಂತಿರುವುದರಿಂದ ಕಟಾವು ಹಂತಕ್ಕೆ ಬಂದಿರುವ ಬೆಳೆಯಲ್ಲಿ ಮೊಳಕೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT