ತಾಲ್ಲೂಕಿನ ಬೀರಸಂದ್ರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ‘ದಶಕಗಳಿಂದ ಕಾಣದಂತಹ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಟಾವಿಗೆ ಬಂದಿದ್ದ ದ್ರಾಕ್ಷಿ, ಕ್ಯಾರೆಟ್, ಬಿಟ್ರೋಟ್, ಬದನೆ, ತೊಂಡೆ, ಹುರಳಿ, ಹೂ ಬೆಳೆ ಮಳೆ ನೀರಿನಿಂದ ಜಲಾವೃತಗೊಂಡು ಹಾಳಾಗಿದೆ’ ಎಂದರು.