ಕಳೆದ ವರ್ಷ ಉತ್ತಮ ಮಳೆ ಇಲ್ಲದೆ ಬೆಳೆ ನಷ್ಟ ಅನುಭವಿಸಿದ್ದೆವು. ಈ ಬಾರಿ ಉತ್ತಮ ಮಳೆಯಾಗಿದೆ. ಹಾಗಾಗಿ, ಸಾಲ ಮಾಡಿ ರಾಗಿ ಬಿತ್ತನೆ ಮಾಡಿದ್ದೇವೆ. ಆದರೆ, ಹೆಚ್ಚಿನ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಈಗ ಕಾಳು ಕಟ್ಟುತ್ತಿರುವ ರಾಗಿ ಬೆಳೆ ತೂಕ ಹಾಗೂ ತೇವಾಂಶ ಹೆಚ್ಚಾಗಿರುವ ಕಾರಣ ನೆಲಕ್ಕುರುಳಿದೆ. ಹಾಗಾಗಿ, ಬೆಳೆ ನಷ್ಟವಾಗುವ ಭೀತಿ ಎದುರಾಗಿದೆ. ಹಾಕಿದ ಬಂಡವಾಳ ಕೈಗೆ ಬರುತ್ತದೋ, ಇಲ್ಲವೋ ಎನ್ನುವ ಆತಂಕ ಕಾಡಲಾರಂಭಿಸಿದೆ. ರಾಗಿ ಜೊತೆಗೆ ಬಿತ್ತನೆ ಮಾಡಿರುವ ಅಲಸಂದೆ, ಅವರೆ ಬೆಳೆಯೂ ಮಳೆಯಿಂದ ನಷ್ಟಕ್ಕೀಡಾಗುವುವ ಸಾಧ್ಯತೆಯಿದೆ ಎನ್ನುತ್ತಾರೆ ರೈತರು.