ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಕೆರೆ ಅಂಗಳದಲ್ಲಿ ಕೊರೆಸಲಾಗಿದ್ದ ಕೊಳವೆಬಾವಿಗಳು ನೀರಿನಲ್ಲಿ ಮುಳುಗಿವೆ. ಕೊಳವೆ ಬಾವಿಗಳಿಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿಗಳು ತುಂಡಾಗಿವೆ. ಅಲ್ಲದೆ, ಕೆರೆ ಅಂಗಳದಲ್ಲಿನ ವಿದ್ಯುತ್ ಪರಿವರ್ತಕ ಮುಳುಗುವ ಸ್ಥಿತಿ ಇದೆ. ಇವುಗಳ ದುರಸ್ತಿ, ಕತ್ತರಿಸಿ ಬಿದ್ದಿರುವ ವಿದ್ಯುತ್ ತಂತಿಗಳನ್ನು ದುರಸ್ತಿ ಮಾಡಲು ಬೆಸ್ಕಾಂ ಸಿಬ್ಬಂದಿ ಹರಸಾಹಸ
ಪಡುವಂತಾಗಿದೆ.