<p>ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಿಂದ ಪಾರ್ಕಿಂಗ್ ಪ್ರದೇಶಕ್ಕೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ‘ಎಲಿವೇಟೆಡ್ ವಾಕ್ ವೇ‘ನಲ್ಲಿ ಮಳೆ ನೀರು ಸಂಗ್ರಹವಾಗಿದೆ. </p>.<p>ಮಳೆ ನೀರಿನಿಂದ ಸೋರುತ್ತಿದೆ ಎಂದು ಆರೋಪಿಸಿರುವ ಪೋಟೊಗಳನ್ನು ಎಕ್ಸ್ನಲ್ಲಿ ಬರೆದುಕೊಂಡಿರುವ ಪ್ರಯಾಣಿಕರೊಬ್ಬರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.</p>.<p>ಮಳೆ ನೀರು ಸೋರಿಕೆಯಿಂದ ಪ್ರಯಾಣಿಕರು ಜಾರಿ ಬೀಳುವ ಸಂಭವವಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ ಎಂದು ಎಕ್ಸ್ನಲ್ಲಿ ಬರೆದು ಲೇವಡಿ ಮಾಡಿದ್ದಾರೆ.</p>.<p>ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಕೆಐಎ ವಕ್ತಾರರು, 'ಪಾದಚಾರಿ ಮಾರ್ಗದ ಮೇಲ್ಛಾವಣಿಯಿಂದ ನೀರು ಸೋರುತ್ತಿಲ್ಲ. ಆದರೆ, ಮಳೆ ರಭಸಕ್ಕೆ ಅಕ್ಕಪಕ್ಕದಿಂದ ನೀರು ಬಂದಿದೆ. ಸಂಗ್ರಹವಾದ ನೀರು ತ್ವರಿತವಾಗಿ ಹೊರಹಾಕಲು ಅಗತ್ಯ ಕ್ರಮಕೈಗೊಳ್ಳಲಾಗಿದೆ‘ ಎಂದು ತಿಳಿಸಿದ್ದಾರೆ. </p>.<p>ಟರ್ಮಿನಲ್-1ರಲ್ಲಿ ಬಂದಿಳಿಯುವ ಪ್ರಯಾಣಿಕರನ್ನು ಪಿ-4 ಪಾರ್ಕಿಂಗ್ ಕಡೆಗೆ ಸಾಗಲು ಹೊಸ 'ಎಲಿವೇಟೆಡ್ ವಾಕ್ ವೇ' ನಿರ್ಮಿಸಲಾಗಿದೆ. ಇದು ಆಗಸ್ಟ್ 25ರಂದು ಲೋಕಾರ್ಪಣೆಗೊಂಡಿತ್ತು.</p>.<p>ಪ್ರಧಾನಿ ಮೋದಿ ಅವರಿಂದ ನವೆಂಬರ್ನಲ್ಲಿ ಉದ್ಘಾಟನೆಗೊಂಡ ಟರ್ಮಿನಲ್-2 ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿದ್ದ ವಿಡಿಯೊ ಹಾಗೂ ಪೋಟೊಗಳು ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಚರ್ಚೆಗೆ ಗ್ರಾಸವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಿಂದ ಪಾರ್ಕಿಂಗ್ ಪ್ರದೇಶಕ್ಕೆ ತೆರಳಲು ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ‘ಎಲಿವೇಟೆಡ್ ವಾಕ್ ವೇ‘ನಲ್ಲಿ ಮಳೆ ನೀರು ಸಂಗ್ರಹವಾಗಿದೆ. </p>.<p>ಮಳೆ ನೀರಿನಿಂದ ಸೋರುತ್ತಿದೆ ಎಂದು ಆರೋಪಿಸಿರುವ ಪೋಟೊಗಳನ್ನು ಎಕ್ಸ್ನಲ್ಲಿ ಬರೆದುಕೊಂಡಿರುವ ಪ್ರಯಾಣಿಕರೊಬ್ಬರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.</p>.<p>ಮಳೆ ನೀರು ಸೋರಿಕೆಯಿಂದ ಪ್ರಯಾಣಿಕರು ಜಾರಿ ಬೀಳುವ ಸಂಭವವಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ ಎಂದು ಎಕ್ಸ್ನಲ್ಲಿ ಬರೆದು ಲೇವಡಿ ಮಾಡಿದ್ದಾರೆ.</p>.<p>ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಕೆಐಎ ವಕ್ತಾರರು, 'ಪಾದಚಾರಿ ಮಾರ್ಗದ ಮೇಲ್ಛಾವಣಿಯಿಂದ ನೀರು ಸೋರುತ್ತಿಲ್ಲ. ಆದರೆ, ಮಳೆ ರಭಸಕ್ಕೆ ಅಕ್ಕಪಕ್ಕದಿಂದ ನೀರು ಬಂದಿದೆ. ಸಂಗ್ರಹವಾದ ನೀರು ತ್ವರಿತವಾಗಿ ಹೊರಹಾಕಲು ಅಗತ್ಯ ಕ್ರಮಕೈಗೊಳ್ಳಲಾಗಿದೆ‘ ಎಂದು ತಿಳಿಸಿದ್ದಾರೆ. </p>.<p>ಟರ್ಮಿನಲ್-1ರಲ್ಲಿ ಬಂದಿಳಿಯುವ ಪ್ರಯಾಣಿಕರನ್ನು ಪಿ-4 ಪಾರ್ಕಿಂಗ್ ಕಡೆಗೆ ಸಾಗಲು ಹೊಸ 'ಎಲಿವೇಟೆಡ್ ವಾಕ್ ವೇ' ನಿರ್ಮಿಸಲಾಗಿದೆ. ಇದು ಆಗಸ್ಟ್ 25ರಂದು ಲೋಕಾರ್ಪಣೆಗೊಂಡಿತ್ತು.</p>.<p>ಪ್ರಧಾನಿ ಮೋದಿ ಅವರಿಂದ ನವೆಂಬರ್ನಲ್ಲಿ ಉದ್ಘಾಟನೆಗೊಂಡ ಟರ್ಮಿನಲ್-2 ಮೇಲ್ಛಾವಣಿಯಿಂದ ಮಳೆ ನೀರು ಸೋರುತ್ತಿದ್ದ ವಿಡಿಯೊ ಹಾಗೂ ಪೋಟೊಗಳು ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಚರ್ಚೆಗೆ ಗ್ರಾಸವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>