<p><strong>ಆನೇಕಲ್</strong>: ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿ ಪ್ರದೇಶದಲ್ಲಿ ನಿರ್ಮಿಸಿದ್ದ ಮನೆಗಳನ್ನು ಕಂದಾಯ ಇಲಾಖೆ ತೆರವುಗೊಳಿಸಿತು. ಇದರಿಂದಾಗಿ ಸುಮಾರು 25 ಕುಟುಂಬಗಳ ಕಾರ್ಮಿಕರು ಬೀದಿ ಪಾಲಾಗಿವೆ.</p>.<p>ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸರ್ವೆ ನಂಬರ್ 10ರಲ್ಲಿ ರಾಜಕಾಲುವೆ ಒತ್ತುವರಿ ಪ್ರದೇಶದಲ್ಲಿ ಬಾಡಿಗೆ ಮನೆಗಳನ್ನು ನಿರ್ಮಿಸಲಾಗಿತ್ತು. ಅಮರಾವತಿ ಎಂಬುವರ ಪ್ಯಾಕಿಂಗ್ ಘಟಕದಲ್ಲಿ ಕೆಲಸ ಮಾಡುವ ಕಾರ್ಮಿಕರು ಈ ಮನೆಗಳಲ್ಲಿ ವಾಸವಾಗಿದ್ದರು. ಸೋಮವಾರ ಮತ್ತು ಮಂಗಳವಾರ ಕಂದಾಯ ಇಲಾಖೆ ದಾಳಿ ನಡೆಸಿ ಈ ಮನೆಗಳನ್ನು ತೆರವುಗೊಳಿಸಿತು. ಇದರ ಪರಿಣಾಮವಾಗಿ 45ಕ್ಕೂ ಹೆಚ್ಚು ಕಾರ್ಮಿಕರಿಗೆ ಆಸರೆ ಇಲ್ಲವಾಗಿದೆ.</p>.<p>ಹೊಟ್ಟೆ ಹೊರೆಯಲು ಪಶ್ಚಿಮ ಬಂಗಾಳ ಮತ್ತು ಓಡಿಶಾದಿಂದ ವಲಸೆ ಬಂದಿರುವ ಈ ಕುಟುಂಬಗಳು ಸ್ನಾನ, ಶೌಚಾಲಯ ಸೌಲಭ್ಯಗಳಿಲ್ಲದೆ ನರಕಯಾತನೆ ಪಡುತ್ತಿವೆ. ಎರಡು ತಿಂಗಳ ಹಸುಗೂಸಿಗೆ ತಾಯಿಯೊಬ್ಬರು ಹಾಲುಣಿಸಲು ಕೂಡ ಪರದಾಡುವ ಸ್ಥಿತಿ ಇದೆ. </p>.<p>ಮನೆ ಮಾಲೀಕರಾದ ಅಮರಾವತಿ, ‘ರಾಜಕಾಲುವೆ ಒತ್ತುವರಿ ಬಗ್ಗೆ ತಿಳಿದಿರಲಿಲ್ಲ. ಕಂದಾಯ ಇಲಾಖೆ ಯಾವುದೇ ಮುನ್ಸೂಚನೆ ನೀಡದೆ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿದ್ದು ಬೇಸರ’ ಎಂದು ವಿವರಿಸಿದರು.</p>.<p>ಜಲಮೂಲ ಸಂರಕ್ಷಣೆಗಾಗಿ ಒತ್ತುವರಿ ತೆರವು ಸರಿ. ಆದರೆ, ಕಾರ್ಮಿಕರು ತಮ್ಮ ಎಲ್ಲ ಸಾಮಗ್ರಿಗಳನ್ನು ಕಾರ್ಖಾನೆಗಳಲ್ಲಿ ಇರಿಸಬೇಕಾಗಿ ಬಂದಿದೆ. ಅವರಿಗೆ ತಕ್ಷಣದ ಸಹಾಯದ ಅವಶ್ಯ ಇದೆ. ಸಂಬಂಧಿತ ಅಧಿಕಾರಿಗಳು ಈ ಕುಟುಂಬಗಳಿಗೆ ಅಗತ್ಯ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು. </p>.<div><blockquote>‘ಕಳೆದ 15 ವರ್ಷಗಳಿಂದ ವಾಸವಾಗಿದ್ದೇವು. ಏಕಾಏಕಿ ಮನೆಗಳನ್ನು ತೆರವುಗೊಳಿಸಿದ್ದರಿಂದ ಬದುಕು ಕಷ್ಟವಾಗಿದೆ. ಈ ಕಾರ್ಮಿಕರಲ್ಲಿ 10 ಮಂದಿ ಮಹಿಳೆಯರಿದ್ದಾರೆ. ಮಕ್ಕಳೂ ಇದ್ದಾರೆ. </blockquote><span class="attribution">ಶುಭಾಂಕರ್ ಮಂಡಲ್, ಕಾರ್ಮಿಕ</span></div>.<div><blockquote>ಏಕಾಏಕಿ ತೆರವುಗೊಳಿಸಿದ್ದರಿಂದ ಕಷ್ಟವಾಗಿದೆ. ಕಾರ್ಮಿಕರಿಗೆ ವಸತಿ ಊಟದ ಸೌಲಭ್ಯ ಕಲ್ಪಿಸಬೇಕು. ಕಳೆದ ಎರಡು ದಿನಗಳಿಂದ ರಸ್ತೆ ಮಧ್ಯೆ ಜೀವನ ನಡೆಸಬೇಕಾದ ಪರಿಸ್ಥಿತಿ ಬಂದಿದೆ. </blockquote><span class="attribution">ರಮೇಶ್, ಸ್ಥಳೀಯ</span></div>.<div><blockquote>ಹಸುಗೂಸಿಗೆ ಹಾಲುಣಿಸಲು ಪೋಷಣೆ ಮಾಡಲು ಕಷ್ಟವಾಗಿದೆ. ಹಾಗಾಗಿ ಮಾಲೀಕರು ಅಥವಾ ಸಂಬಂಧಪಟ್ಟವರು ಪರ್ಯಾಯ ವ್ಯವಸ್ಥೆ ಮಾಡಬೇಕು.</blockquote><span class="attribution"> ಸುಷ್ಮಿತಾ, ಕಾರ್ಮಿಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿ ಪ್ರದೇಶದಲ್ಲಿ ನಿರ್ಮಿಸಿದ್ದ ಮನೆಗಳನ್ನು ಕಂದಾಯ ಇಲಾಖೆ ತೆರವುಗೊಳಿಸಿತು. ಇದರಿಂದಾಗಿ ಸುಮಾರು 25 ಕುಟುಂಬಗಳ ಕಾರ್ಮಿಕರು ಬೀದಿ ಪಾಲಾಗಿವೆ.</p>.<p>ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಸರ್ವೆ ನಂಬರ್ 10ರಲ್ಲಿ ರಾಜಕಾಲುವೆ ಒತ್ತುವರಿ ಪ್ರದೇಶದಲ್ಲಿ ಬಾಡಿಗೆ ಮನೆಗಳನ್ನು ನಿರ್ಮಿಸಲಾಗಿತ್ತು. ಅಮರಾವತಿ ಎಂಬುವರ ಪ್ಯಾಕಿಂಗ್ ಘಟಕದಲ್ಲಿ ಕೆಲಸ ಮಾಡುವ ಕಾರ್ಮಿಕರು ಈ ಮನೆಗಳಲ್ಲಿ ವಾಸವಾಗಿದ್ದರು. ಸೋಮವಾರ ಮತ್ತು ಮಂಗಳವಾರ ಕಂದಾಯ ಇಲಾಖೆ ದಾಳಿ ನಡೆಸಿ ಈ ಮನೆಗಳನ್ನು ತೆರವುಗೊಳಿಸಿತು. ಇದರ ಪರಿಣಾಮವಾಗಿ 45ಕ್ಕೂ ಹೆಚ್ಚು ಕಾರ್ಮಿಕರಿಗೆ ಆಸರೆ ಇಲ್ಲವಾಗಿದೆ.</p>.<p>ಹೊಟ್ಟೆ ಹೊರೆಯಲು ಪಶ್ಚಿಮ ಬಂಗಾಳ ಮತ್ತು ಓಡಿಶಾದಿಂದ ವಲಸೆ ಬಂದಿರುವ ಈ ಕುಟುಂಬಗಳು ಸ್ನಾನ, ಶೌಚಾಲಯ ಸೌಲಭ್ಯಗಳಿಲ್ಲದೆ ನರಕಯಾತನೆ ಪಡುತ್ತಿವೆ. ಎರಡು ತಿಂಗಳ ಹಸುಗೂಸಿಗೆ ತಾಯಿಯೊಬ್ಬರು ಹಾಲುಣಿಸಲು ಕೂಡ ಪರದಾಡುವ ಸ್ಥಿತಿ ಇದೆ. </p>.<p>ಮನೆ ಮಾಲೀಕರಾದ ಅಮರಾವತಿ, ‘ರಾಜಕಾಲುವೆ ಒತ್ತುವರಿ ಬಗ್ಗೆ ತಿಳಿದಿರಲಿಲ್ಲ. ಕಂದಾಯ ಇಲಾಖೆ ಯಾವುದೇ ಮುನ್ಸೂಚನೆ ನೀಡದೆ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿದ್ದು ಬೇಸರ’ ಎಂದು ವಿವರಿಸಿದರು.</p>.<p>ಜಲಮೂಲ ಸಂರಕ್ಷಣೆಗಾಗಿ ಒತ್ತುವರಿ ತೆರವು ಸರಿ. ಆದರೆ, ಕಾರ್ಮಿಕರು ತಮ್ಮ ಎಲ್ಲ ಸಾಮಗ್ರಿಗಳನ್ನು ಕಾರ್ಖಾನೆಗಳಲ್ಲಿ ಇರಿಸಬೇಕಾಗಿ ಬಂದಿದೆ. ಅವರಿಗೆ ತಕ್ಷಣದ ಸಹಾಯದ ಅವಶ್ಯ ಇದೆ. ಸಂಬಂಧಿತ ಅಧಿಕಾರಿಗಳು ಈ ಕುಟುಂಬಗಳಿಗೆ ಅಗತ್ಯ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡಿದರು. </p>.<div><blockquote>‘ಕಳೆದ 15 ವರ್ಷಗಳಿಂದ ವಾಸವಾಗಿದ್ದೇವು. ಏಕಾಏಕಿ ಮನೆಗಳನ್ನು ತೆರವುಗೊಳಿಸಿದ್ದರಿಂದ ಬದುಕು ಕಷ್ಟವಾಗಿದೆ. ಈ ಕಾರ್ಮಿಕರಲ್ಲಿ 10 ಮಂದಿ ಮಹಿಳೆಯರಿದ್ದಾರೆ. ಮಕ್ಕಳೂ ಇದ್ದಾರೆ. </blockquote><span class="attribution">ಶುಭಾಂಕರ್ ಮಂಡಲ್, ಕಾರ್ಮಿಕ</span></div>.<div><blockquote>ಏಕಾಏಕಿ ತೆರವುಗೊಳಿಸಿದ್ದರಿಂದ ಕಷ್ಟವಾಗಿದೆ. ಕಾರ್ಮಿಕರಿಗೆ ವಸತಿ ಊಟದ ಸೌಲಭ್ಯ ಕಲ್ಪಿಸಬೇಕು. ಕಳೆದ ಎರಡು ದಿನಗಳಿಂದ ರಸ್ತೆ ಮಧ್ಯೆ ಜೀವನ ನಡೆಸಬೇಕಾದ ಪರಿಸ್ಥಿತಿ ಬಂದಿದೆ. </blockquote><span class="attribution">ರಮೇಶ್, ಸ್ಥಳೀಯ</span></div>.<div><blockquote>ಹಸುಗೂಸಿಗೆ ಹಾಲುಣಿಸಲು ಪೋಷಣೆ ಮಾಡಲು ಕಷ್ಟವಾಗಿದೆ. ಹಾಗಾಗಿ ಮಾಲೀಕರು ಅಥವಾ ಸಂಬಂಧಪಟ್ಟವರು ಪರ್ಯಾಯ ವ್ಯವಸ್ಥೆ ಮಾಡಬೇಕು.</blockquote><span class="attribution"> ಸುಷ್ಮಿತಾ, ಕಾರ್ಮಿಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>