<p><strong>ಆನೇಕಲ್: </strong>ಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿ ಲಕ್ಷಾಂತರ ರೂಪಾಯಿ ಬಾಡಿಗೆ ಪಡೆಯುತ್ತಿದ್ದ ಮನೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ತೆರವು ಕಾರ್ಯಾಚರಣೆ ನಡೆಸಲಾಯಿತು.</p>.<p>ಬೊಮ್ಮಸಂದ್ರ ಸರ್ವೆ ನಂ. 4, 5, 9, 10, 12, 25, 28ರಲ್ಲಿ ಬೊಮ್ಮಸಂದ್ರ ಕೆರೆಯ ಜಲಮೂಲವಾಗಿರುವ ರಾಜಕಾಲುವೆಯನ್ನು ಮಹಿಳೆಯರೊಬ್ಬರು ಒತ್ತುವರಿ ಮಾಡಿಕೊಂಡು 28 ಮನೆಗಳನ್ನು ನಿರ್ಮಿಸಿದ್ದರು. ಪ್ರತಿ ತಿಂಗಳು₹ 10 ಸಾವಿರದಂತೆ ಬಾಡಿಗೆ ವಸೂಲಿ ಮಾಡುತ್ತಿದ್ದರು.</p>.<p>ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ನವೀನ್ ಕುಮಾರ್, ರಾಜಸ್ವ ನಿರೀಕ್ಷಕಕ ಸಂತೋಷ್, ಗ್ರಾಮ ಆಡಳಿತಾಧಿಕಾರಿ ಶಶಿಕುಮಾರ್ ರಾಜಕಾಲುವೆಯ ಒತ್ತುವರಿಯನ್ನು ತೆರವು ಮಾಡಿದ್ದಾರೆ.</p>.<p>ಭೂಗಳ್ಳರು ರಾಜಕಾಲುವೆಯನ್ನು ಒತ್ತುವರಿ ಮಾಡಿ ಮನೆ ನಿರ್ಮಿಸಿದ್ದರು. ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜೆಸಿಬಿಯ ಮೂಲಕ ಮನೆ ತೆರವುಗೊಳಿಸಲಾಯಿತು. ಲೋಕಾಯುಕ್ತದಲ್ಲಿಯೂ ಈ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ರಾಜಕಾಲುವೆಯ ಒತ್ತುವರಿ ತೆರವಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಉಳಿಸಿದಂತಾಗಿದೆ ಎಂದು ಉಪತಹಶೀಲ್ದಾರ್ ನವೀನ್ ಕುಮಾರ್ ತಿಳಿಸಿದರು.</p>
<p><strong>ಆನೇಕಲ್: </strong>ಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿ ಲಕ್ಷಾಂತರ ರೂಪಾಯಿ ಬಾಡಿಗೆ ಪಡೆಯುತ್ತಿದ್ದ ಮನೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡರು.</p>.<p>ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ತೆರವು ಕಾರ್ಯಾಚರಣೆ ನಡೆಸಲಾಯಿತು.</p>.<p>ಬೊಮ್ಮಸಂದ್ರ ಸರ್ವೆ ನಂ. 4, 5, 9, 10, 12, 25, 28ರಲ್ಲಿ ಬೊಮ್ಮಸಂದ್ರ ಕೆರೆಯ ಜಲಮೂಲವಾಗಿರುವ ರಾಜಕಾಲುವೆಯನ್ನು ಮಹಿಳೆಯರೊಬ್ಬರು ಒತ್ತುವರಿ ಮಾಡಿಕೊಂಡು 28 ಮನೆಗಳನ್ನು ನಿರ್ಮಿಸಿದ್ದರು. ಪ್ರತಿ ತಿಂಗಳು₹ 10 ಸಾವಿರದಂತೆ ಬಾಡಿಗೆ ವಸೂಲಿ ಮಾಡುತ್ತಿದ್ದರು.</p>.<p>ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ನವೀನ್ ಕುಮಾರ್, ರಾಜಸ್ವ ನಿರೀಕ್ಷಕಕ ಸಂತೋಷ್, ಗ್ರಾಮ ಆಡಳಿತಾಧಿಕಾರಿ ಶಶಿಕುಮಾರ್ ರಾಜಕಾಲುವೆಯ ಒತ್ತುವರಿಯನ್ನು ತೆರವು ಮಾಡಿದ್ದಾರೆ.</p>.<p>ಭೂಗಳ್ಳರು ರಾಜಕಾಲುವೆಯನ್ನು ಒತ್ತುವರಿ ಮಾಡಿ ಮನೆ ನಿರ್ಮಿಸಿದ್ದರು. ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜೆಸಿಬಿಯ ಮೂಲಕ ಮನೆ ತೆರವುಗೊಳಿಸಲಾಯಿತು. ಲೋಕಾಯುಕ್ತದಲ್ಲಿಯೂ ಈ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ರಾಜಕಾಲುವೆಯ ಒತ್ತುವರಿ ತೆರವಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಉಳಿಸಿದಂತಾಗಿದೆ ಎಂದು ಉಪತಹಶೀಲ್ದಾರ್ ನವೀನ್ ಕುಮಾರ್ ತಿಳಿಸಿದರು.</p>