ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಸಂಕಷ್ಟದಲ್ಲಿದೆ. ಇವುಗಳನ್ನು ಉಳಿಸಲು ಪರಿವರ್ತನಾ ಯಾತ್ರೆಯು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೊರಡುತ್ತಿದೆ. ಇದಕ್ಕಾಗಿ ದೇಶದ ಎಲ್ಲಾ ಬಹುಜನ ಸಮಾಜದ ಮುಖಂಡರು, ಬುದ್ಧಿಜೀವಿಗಳು, ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಯುವಕರು ಮತ್ತು ದೇಶದ ಎಲ್ಲಾ ಸಂಘಟನೆಗಳು ಸಹಕಾರ ನೀಡಬೇಕು ಎಂದು ಕೋರಿದರು.