ಈ ಬಗ್ಗೆ ಮಾಹಿತಿ ನೀಡಿ,ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಆಚರಣೆ,ಮಜ್ಜಿಗೆ,ಪಾನಕ ವಿನಿಮಯ ಮಾಡುವಂತಿಲ್ಲ. ಸಾರ್ವಜನಿಕರು ತಮ್ಮ ಮನೆಗಳಲ್ಲಿಯೇ ಶ್ರೀ ರಾಮನವಮಿಯನ್ನು ಸರಳವಾಗಿ ಆಚರಣೆ ಮಾಡುವ ಮೂಲಕ ಕೋವಿಡ್ ಸೋಂಕಿನ ಹರಡುವಿಕೆ ನಿಯಂತ್ರಣಕ್ಕೆ ಸಹಕಾರ ನೀಡಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಆಯಾ ತಾಲ್ಲೂಕಿನಲ್ಲಿ ತಹಶೀಲ್ದಾರ್, ಪುರಸಭೆ,ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.