ಕೆಲ ದಿನಗಳಿಂದ ವಣಕನಹಳ್ಳಿ, ಮೆಣಸಿಗಹಳ್ಳಿ, ಸುಣವಾರ, ಪಟ್ಟಣಗೆರೆ ಗೊಲ್ಲಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಆನೆಗಳು ದಾಳಿ ನಡೆಸಿ ಬೆಳೆಗಳನ್ನು ಹಾಳುಮಾಡುತ್ತಿವೆ. ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ಮಾಡಿದರು ಕಣ್ತಪ್ಪಿಸಿ ಆನೆಗಳು ಕಾಡಿನಿಂದ ಗ್ರಾಮಗಳತ್ತ ನುಗ್ಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.