<p><strong>ಆನೇಕಲ್: </strong>ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ರೆಡ್ಡಿ ಜನಸಂಘವು ಬೆಂಬಲ ಸೂಚಿಸಿತು. ರೆಡ್ಡಿಜನ ಸಂಘದ ಪದಾಧಿಕಾರಿಗಳು ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>ರೆಡ್ಡಿ ಜನಸಂಘದ ನಿರ್ದೇಶಕ ಎಂಬಿಐ ಸೋಮಶೇಖರರೆಡ್ಡಿ ಮಾತನಾಡಿ, ರೈತರು ಈ ದೇಶದ ಅಸ್ಮಿತೆ. ಆನೇಕಲ್ ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳು ಇರುವುದರಿಂದ ಮತ್ತೊಂದು ಕೈಗಾರಿಕಾ ಪ್ರದೇಶದ ಅಗತ್ಯವಿಲ್ಲ. ರೈತರ ಕೃಷಿ ಭೂಮಿ ಕೈಗಾರಿಕೆಗಳಿಗೆ ನೀಡುವುದು ಖಂಡನೀಯ ಎಂದರು.</p>.<p>ಮುಂದಿನ ದಿನಗಳಲ್ಲಿ ರೈತರ ನಿಯೋಗದೊಂದಿಗೆ ರೆಡ್ಡಿ ಜನಸಂಘವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರೈತರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಿದೆ ಎಂದರು.</p>.<p>ರೈತರ ಹೋರಾಟಕ್ಕೆ ಬೆಂಬಲ ನೀಡುವುದು ನಮ್ಮ ಜವಾಬ್ದಾರಿ. ಒಂದು ತಿಂಗಳಿನಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮತ್ತು ಅಧಿಕಾರಿಗಳು ಗಮನ ನೀಡದಿರುವುದು ಖಂಡನೀಯ. ರೈತರ ಹೋರಾಟಕ್ಕೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಬೇಕು. ಈ ಮೂಲಕ ಕೃಷಿ ಜಮೀನುಗಳನ್ನು ಉಳಿಸಬೇಕು ಎಂದು ಒತ್ತಾಯಿಸಿದರು. </p>.<p>ಚಂದಾಪುರ ಮುರಳಿ ಮಾತನಾಡಿ, ಕೆಐಎಡಿಬಿ ಅಧಿಕಾರಿಗಳು ರೈತರ ಭೂಮಿಯಷ್ಟೇ ಕದಿಯುವುದಿಲ್ಲ. ಇದರ ಜೊತೆಗೆ ರೈತರ ಅಸ್ಮಿತೆ ಮತ್ತು ಅಸ್ತಿತ್ವವನ್ನೂ ಕದಿಯುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ರೈತರು ಯಾವುದೇ ಕಾರಣಕ್ಕೂ ಕೆಐಎಡಿಬಿಗೆ ಭೂಮಿ ನೀಡಬಾರದು. ರೈತರ ಹೋರಾಟಕ್ಕೆ ಬಲ ನೀಡಲು ರೆಡ್ಡಿಜನ ಸಂಘ ಬೆಂಬಲ ಸೂಚಿಸಿದೆ. ರೈತರು ಶಾಂತಿಯಿಂದ ಹೋರಾಟ ನಡೆಸುತ್ತಿದ್ದು, ಸರ್ಕಾರ ಬೆಂಬಲ ನೀಡದಿದ್ದರೆ ಕ್ರಾಂತಿಯಿಂದ ನಮ್ಮ ಭೂಮಿಯನ್ನು ಉಳಿಸಿಕೊಳ್ಳುತ್ತೇವೆ ಎಂದರು. </p>.<p>ರೆಡ್ಡಿ ಜನಸಂಘ ರಾಜ್ಯ ನಿರ್ದೇಶಕ ನಾಗರಾಜರೆಡ್ಡಿ, ಜಯಪ್ರಕಾಶ್, ರೆಡ್ಡಿ, ರೆಡ್ಡಿ ಯುವ ಸಂಘದ ತಾಲ್ಲೂಕು ಅಧ್ಯಕ್ಷ ನ್ಯೂಟನ್ ರೆಡ್ಡಿ, ಚಿನ್ನಪ್ಪ.ವೈ. ಚಿಕ್ಕಹಾಗಡೆ, ಮಂಜುನಾಥರೆಡ್ಡಿ, ಮುರಳಿ, ಮುತ್ತುಕೇಶವ, ವಿಶ್ವನಾಥರೆಡ್ಡಿ, ಕೃಷ್ಣಾರೆಡ್ಡಿ, ಜಿಗಳ ರಾಕೇಶ್, ತ್ಯಾವಕನಹಳ್ಳಿ ಮುರಳಿ, ಅನಿಲ್ ರೆಡ್ಡಿ, ಪ್ರಶಾಂತ್ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ರೆಡ್ಡಿ ಜನಸಂಘವು ಬೆಂಬಲ ಸೂಚಿಸಿತು. ರೆಡ್ಡಿಜನ ಸಂಘದ ಪದಾಧಿಕಾರಿಗಳು ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು.</p>.<p>ರೆಡ್ಡಿ ಜನಸಂಘದ ನಿರ್ದೇಶಕ ಎಂಬಿಐ ಸೋಮಶೇಖರರೆಡ್ಡಿ ಮಾತನಾಡಿ, ರೈತರು ಈ ದೇಶದ ಅಸ್ಮಿತೆ. ಆನೇಕಲ್ ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳು ಇರುವುದರಿಂದ ಮತ್ತೊಂದು ಕೈಗಾರಿಕಾ ಪ್ರದೇಶದ ಅಗತ್ಯವಿಲ್ಲ. ರೈತರ ಕೃಷಿ ಭೂಮಿ ಕೈಗಾರಿಕೆಗಳಿಗೆ ನೀಡುವುದು ಖಂಡನೀಯ ಎಂದರು.</p>.<p>ಮುಂದಿನ ದಿನಗಳಲ್ಲಿ ರೈತರ ನಿಯೋಗದೊಂದಿಗೆ ರೆಡ್ಡಿ ಜನಸಂಘವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರೈತರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಿದೆ ಎಂದರು.</p>.<p>ರೈತರ ಹೋರಾಟಕ್ಕೆ ಬೆಂಬಲ ನೀಡುವುದು ನಮ್ಮ ಜವಾಬ್ದಾರಿ. ಒಂದು ತಿಂಗಳಿನಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮತ್ತು ಅಧಿಕಾರಿಗಳು ಗಮನ ನೀಡದಿರುವುದು ಖಂಡನೀಯ. ರೈತರ ಹೋರಾಟಕ್ಕೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಬೇಕು. ಈ ಮೂಲಕ ಕೃಷಿ ಜಮೀನುಗಳನ್ನು ಉಳಿಸಬೇಕು ಎಂದು ಒತ್ತಾಯಿಸಿದರು. </p>.<p>ಚಂದಾಪುರ ಮುರಳಿ ಮಾತನಾಡಿ, ಕೆಐಎಡಿಬಿ ಅಧಿಕಾರಿಗಳು ರೈತರ ಭೂಮಿಯಷ್ಟೇ ಕದಿಯುವುದಿಲ್ಲ. ಇದರ ಜೊತೆಗೆ ರೈತರ ಅಸ್ಮಿತೆ ಮತ್ತು ಅಸ್ತಿತ್ವವನ್ನೂ ಕದಿಯುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ರೈತರು ಯಾವುದೇ ಕಾರಣಕ್ಕೂ ಕೆಐಎಡಿಬಿಗೆ ಭೂಮಿ ನೀಡಬಾರದು. ರೈತರ ಹೋರಾಟಕ್ಕೆ ಬಲ ನೀಡಲು ರೆಡ್ಡಿಜನ ಸಂಘ ಬೆಂಬಲ ಸೂಚಿಸಿದೆ. ರೈತರು ಶಾಂತಿಯಿಂದ ಹೋರಾಟ ನಡೆಸುತ್ತಿದ್ದು, ಸರ್ಕಾರ ಬೆಂಬಲ ನೀಡದಿದ್ದರೆ ಕ್ರಾಂತಿಯಿಂದ ನಮ್ಮ ಭೂಮಿಯನ್ನು ಉಳಿಸಿಕೊಳ್ಳುತ್ತೇವೆ ಎಂದರು. </p>.<p>ರೆಡ್ಡಿ ಜನಸಂಘ ರಾಜ್ಯ ನಿರ್ದೇಶಕ ನಾಗರಾಜರೆಡ್ಡಿ, ಜಯಪ್ರಕಾಶ್, ರೆಡ್ಡಿ, ರೆಡ್ಡಿ ಯುವ ಸಂಘದ ತಾಲ್ಲೂಕು ಅಧ್ಯಕ್ಷ ನ್ಯೂಟನ್ ರೆಡ್ಡಿ, ಚಿನ್ನಪ್ಪ.ವೈ. ಚಿಕ್ಕಹಾಗಡೆ, ಮಂಜುನಾಥರೆಡ್ಡಿ, ಮುರಳಿ, ಮುತ್ತುಕೇಶವ, ವಿಶ್ವನಾಥರೆಡ್ಡಿ, ಕೃಷ್ಣಾರೆಡ್ಡಿ, ಜಿಗಳ ರಾಕೇಶ್, ತ್ಯಾವಕನಹಳ್ಳಿ ಮುರಳಿ, ಅನಿಲ್ ರೆಡ್ಡಿ, ಪ್ರಶಾಂತ್ ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>