<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಗರದ ಸೋಮೇಶ್ವರ ದೇವಾಲಯದಲ್ಲಿ ನಡೆಯಿತು.</p>.<p>ತಹಶೀಲ್ದಾರ್ ಬಿ.ಎ.ಮೋಹನ್ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ‘ಲೋಕಲ್ಯಾಣವನ್ನು ಬಯಸುವ ಆಗಮಿಕರು ಸಂಘಟನಾತ್ಮಕವಾಗಿ ಒಂದಾಗುವುದು ಉತ್ತಮ ಬೆಳವಣಿಗೆ. ತಸ್ತಿಕ್ ವಿಳಂಬ ಸೇರಿದಂತೆ ಆಗಮಿಕರ ಮನವಿಗಳನ್ನು ಪುರಸ್ಕರಿಸಿ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಕ್ರಮ ಕೈಗೊಳ್ಳುವೆ’ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಮುಜರಾಯಿ ದೇವಾಲಯಗಳ ಅರ್ಚಕರ ಮಕ್ಕಳ ಆಗಮ ವೇದ ಅಧ್ಯಯನ ತರಗತಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಸೋಮೇಶ್ವರ ದೇವಾಲಯದ ಹಿಂಭಾಗದ ಕೊಠಡಿಯನ್ನು ತಹಶೀಲ್ದಾರ್ ಸಮಕ್ಷಮದಲ್ಲಿ ಅರ್ಚಕರ ಸಂಘಕ್ಕೆ ನೀಡಲಾಯಿತು. ಈ ಸಂಬಂಧ ಕೊಠಡಿಯ ಬೀಗದ ಕೈ ಹಸ್ತಾಂತರಿಸಲಾಯಿತು.</p>.<p>ಸೋಮೇಶ್ವರ ದೇವಾಲಯದ ಅಭಿವೃದ್ಧಿ ಸಮಿತಿಯ ಜಿ.ಎಸ್.ಉಮಾಶಂಕರ್, ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸ ರಾಘವನ್, ಅಧ್ಯಕ್ಷ ಕೆ.ವಿ.ಸುರೇಶ್ ಮೂರ್ತಿ, ಉಪಾಧ್ಯಕ್ಷ ವೇದಮೂರ್ತಿ, ಟಿ.ಎಸ್.ಸೋಮಶೇಖರ್ ಆರಾಧ್ಯ ಶಾಸ್ತ್ರಿ ಹಾಗೂ ಸಂಘದ ಪದಾಧಿಕಾರಿಗಳು ಅರ್ಚಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ವತಿಯಿಂದ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ನಗರದ ಸೋಮೇಶ್ವರ ದೇವಾಲಯದಲ್ಲಿ ನಡೆಯಿತು.</p>.<p>ತಹಶೀಲ್ದಾರ್ ಬಿ.ಎ.ಮೋಹನ್ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ‘ಲೋಕಲ್ಯಾಣವನ್ನು ಬಯಸುವ ಆಗಮಿಕರು ಸಂಘಟನಾತ್ಮಕವಾಗಿ ಒಂದಾಗುವುದು ಉತ್ತಮ ಬೆಳವಣಿಗೆ. ತಸ್ತಿಕ್ ವಿಳಂಬ ಸೇರಿದಂತೆ ಆಗಮಿಕರ ಮನವಿಗಳನ್ನು ಪುರಸ್ಕರಿಸಿ ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಕ್ರಮ ಕೈಗೊಳ್ಳುವೆ’ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಮುಜರಾಯಿ ದೇವಾಲಯಗಳ ಅರ್ಚಕರ ಮಕ್ಕಳ ಆಗಮ ವೇದ ಅಧ್ಯಯನ ತರಗತಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಸೋಮೇಶ್ವರ ದೇವಾಲಯದ ಹಿಂಭಾಗದ ಕೊಠಡಿಯನ್ನು ತಹಶೀಲ್ದಾರ್ ಸಮಕ್ಷಮದಲ್ಲಿ ಅರ್ಚಕರ ಸಂಘಕ್ಕೆ ನೀಡಲಾಯಿತು. ಈ ಸಂಬಂಧ ಕೊಠಡಿಯ ಬೀಗದ ಕೈ ಹಸ್ತಾಂತರಿಸಲಾಯಿತು.</p>.<p>ಸೋಮೇಶ್ವರ ದೇವಾಲಯದ ಅಭಿವೃದ್ಧಿ ಸಮಿತಿಯ ಜಿ.ಎಸ್.ಉಮಾಶಂಕರ್, ತಾಲ್ಲೂಕು ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಸಂಘದ ಗೌರವಾಧ್ಯಕ್ಷ ಶ್ರೀನಿವಾಸ ರಾಘವನ್, ಅಧ್ಯಕ್ಷ ಕೆ.ವಿ.ಸುರೇಶ್ ಮೂರ್ತಿ, ಉಪಾಧ್ಯಕ್ಷ ವೇದಮೂರ್ತಿ, ಟಿ.ಎಸ್.ಸೋಮಶೇಖರ್ ಆರಾಧ್ಯ ಶಾಸ್ತ್ರಿ ಹಾಗೂ ಸಂಘದ ಪದಾಧಿಕಾರಿಗಳು ಅರ್ಚಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>