ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು, ನೌಕರರು ಸೇರಿದಂತೆ ನೀರಾವರಿ ಪರವಾದ ಹೋರಾಟದಲ್ಲಿ ಅವರ ಛಾಯೆ ಇತ್ತು. ಧ್ವನಿ ಇಲ್ಲದವರಿಗೆ ದನಿಯಾಗಿದ್ದರು.ಹಲವು ದಶಕಗಳ ಸಾರ್ವಜನಿಕ ಮತ್ತು ರಾಜಕಾರಣದ ಬದುಕಿನಲ್ಲಿ ಎಂದಿಗೂ ರಾಜಿ ಮಾಡಿಕೊಂಡವರಲ್ಲ. ಅವರಲ್ಲಿದ್ದ ಬದ್ಧತೆಯಿಂದಲೇ ಜನನಾಯಕರಾಗಿದ್ದರು. ಅವಿಭಜಿತ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹೋರಾಟಕ್ಕೆ ನಾಂದಿ ಹಾಡಿದ್ದರು ಎಂದು ಸ್ಮರಿಸಿದರು.