<p><strong>ಆನೇಕಲ್: </strong>ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಡಿಹೊಸಕೋಟೆ ಗ್ರಾಮದ ರೇಣುಕಾ ಯಲ್ಲಮ್ಮ ದೇವಿ ದೇವಾಲಯದ ಜಾತ್ರ ಮಹೋತ್ಸವ ಮತ್ತು ದೀಪೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.</p>.<p>ದೇವಾಲಯದಲ್ಲಿ ಬೆಳಗಿನಿಂದಲೂ ಪೂಜೆ ಏರ್ಪಡಿಸಲಾಗಿತ್ತು. ಸುತ್ತಮುತ್ತಲ ಗ್ರಾಮಸ್ಥರು ದರ್ಶನ ಪಡೆದರು. ಮಹಿಳೆಯರು ಅಲಂಕೃತ ದೀಪ ಹೊತ್ತು ದೇವಿಗೆ ಆರತಿ ಸಲ್ಲಿಸಿ ಭಕ್ತಿ ಸಮರ್ಪಿಸಿದರು.</p>.<p>ಡೋಲು ಮತ್ತು ನಾದಸ್ವರ ಕಲಾವಿದರಯ ಆಕರ್ಷಕ ಪ್ರದರ್ಶನ ನೀಡಿದರು. ದೀಪೋತ್ಸವದ ಪ್ರಯುಕ್ತ ಅನ್ನದಾಸೋಹ ಏರ್ಪಡಿಸಲಾಗಿತ್ತು. </p>.<p>ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಖಾಸಗಿ ಬಡಾವಣೆಯವರು ಮುಚ್ಚಿದ್ದಾರೆಎಂದು ಗ್ರಾಮಸ್ಥರು ಆನೇಕಲ್ ಯೋಜನಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ ಎಂದು ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿಡಿಹೊಸಕೋಟೆ ಮುನಿರಾಜು ಹೇಳಿದ್ದಾರೆ.</p>.<p>ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕೃಷಿ ಜಮೀನುಗಳಿಗೆ ಮತ್ತು ದೇವಾಲಯಕ್ಕೆ ಓಡಾಡುವ ಸಲುವಾಗಿ ಕಾಂಪೌಂಡ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಡಿಹೊಸಕೋಟೆ ಗ್ರಾಮದ ರೇಣುಕಾ ಯಲ್ಲಮ್ಮ ದೇವಿ ದೇವಾಲಯದ ಜಾತ್ರ ಮಹೋತ್ಸವ ಮತ್ತು ದೀಪೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.</p>.<p>ದೇವಾಲಯದಲ್ಲಿ ಬೆಳಗಿನಿಂದಲೂ ಪೂಜೆ ಏರ್ಪಡಿಸಲಾಗಿತ್ತು. ಸುತ್ತಮುತ್ತಲ ಗ್ರಾಮಸ್ಥರು ದರ್ಶನ ಪಡೆದರು. ಮಹಿಳೆಯರು ಅಲಂಕೃತ ದೀಪ ಹೊತ್ತು ದೇವಿಗೆ ಆರತಿ ಸಲ್ಲಿಸಿ ಭಕ್ತಿ ಸಮರ್ಪಿಸಿದರು.</p>.<p>ಡೋಲು ಮತ್ತು ನಾದಸ್ವರ ಕಲಾವಿದರಯ ಆಕರ್ಷಕ ಪ್ರದರ್ಶನ ನೀಡಿದರು. ದೀಪೋತ್ಸವದ ಪ್ರಯುಕ್ತ ಅನ್ನದಾಸೋಹ ಏರ್ಪಡಿಸಲಾಗಿತ್ತು. </p>.<p>ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಖಾಸಗಿ ಬಡಾವಣೆಯವರು ಮುಚ್ಚಿದ್ದಾರೆಎಂದು ಗ್ರಾಮಸ್ಥರು ಆನೇಕಲ್ ಯೋಜನಾ ಪ್ರಾಧಿಕಾರಕ್ಕೆ ದೂರು ನೀಡಿದ್ದಾರೆ ಎಂದು ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿಡಿಹೊಸಕೋಟೆ ಮುನಿರಾಜು ಹೇಳಿದ್ದಾರೆ.</p>.<p>ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕೃಷಿ ಜಮೀನುಗಳಿಗೆ ಮತ್ತು ದೇವಾಲಯಕ್ಕೆ ಓಡಾಡುವ ಸಲುವಾಗಿ ಕಾಂಪೌಂಡ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>