<p><strong>ಸೋಲದೇವನಹಳ್ಳಿ(ನೆಲಮಂಗಲ):</strong> ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ವಿಡಿಯೊ ಚಿತ್ರೀಕರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.</p><p>ಕುಶಾಲ್ ಹಲ್ಲೆಗೊಳಗಾದ ಯುವಕ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಯುವತಿಯೊಬ್ಬಳನ್ನು ಕುಶಾಲ್ ಪ್ರೀತಿಸುತ್ತಿದ್ದು, ಎರಡು ವರ್ಷದ ಈ ಪ್ರೇಮ ಸಂಬಂಧ ಇತ್ತೀಚೆಗೆ ಮುರಿದು ಬಿದ್ದಿತ್ತು. ಈ ನಡುವೆ ಆಕೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಾಳೆ ಎಂಬ ವಿಷಯ ತಿಳಿದ ಕುಶಾಲ್ ಆಕೆಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ.</p><p>ಈ ಸಂದೇಶವನ್ನು ಯುವತಿ ಪ್ರಿಯಕರನಿಗೆ ತೋರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆತ ತನ್ನ ಸ್ನೇಹಿತರೊಂದಿಗೆ ಕುಶಾಲ್ನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ ಎನ್ನಲಾಗಿದೆ.</p><p>ಕುಶಾಲ್ನ ಬಟ್ಟೆ ಬಿಚ್ಚಿ, ಮರ್ಮಾಂಗಕ್ಕೆ ತುಳಿದು ಚಿತ್ರಹಿಂಸೆ ನೀಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಅಲ್ಲದೇ, ಆರೋಪಿಯೊಬ್ಬ, ‘ರೇಣಿಕಸ್ವಾಮಿ ಕೊಲೆ ಪ್ರಕರಣದಂತೆ ಇದು ಆಗುತ್ತದೆ’ ಎಂದು ಹೇಳಿರುವುದು ರೆಕಾರ್ಡ್ ಆಗಿದೆ.</p><p>ಚಿತ್ರದುರ್ಗದ ರೇಣುಕಸ್ವಾಮಿ ಎಂಬಾತ ನಟ ದರ್ಶನ್ ತೂಗುದೀಪ ಅವರ ಆಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದು, ನಂತರ ಆ ಪ್ರಕರಣ ಕೊಲೆಯಲ್ಲಿ ಅಂತ್ಯವಾಗಿರುವುದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. </p><p>ರೇಣುಕಸ್ವಾಮಿ ಅವರನ್ನು ಶೆಡ್ವೊಂದಕ್ಕೆ ಕರೆದುಕೊಂಡು ಹೋಗಿದ್ದ ದರ್ಶನ್ ಮತ್ತು ಅವರ ಸ್ನೇಹಿತರು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p><p>ಈಗ ಅಂತಹದ್ದೇ ಘಟನೆ ಮರುಕಳಿಸಿರುವುದು ಮತ್ತು ಆ ಘಟನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡಿರುವುದು ಆತಂಕ ಹುಟ್ಟುಹಾಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೋಲದೇವನಹಳ್ಳಿ(ನೆಲಮಂಗಲ):</strong> ಯುವತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ವಿಡಿಯೊ ಚಿತ್ರೀಕರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.</p><p>ಕುಶಾಲ್ ಹಲ್ಲೆಗೊಳಗಾದ ಯುವಕ. ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಯುವತಿಯೊಬ್ಬಳನ್ನು ಕುಶಾಲ್ ಪ್ರೀತಿಸುತ್ತಿದ್ದು, ಎರಡು ವರ್ಷದ ಈ ಪ್ರೇಮ ಸಂಬಂಧ ಇತ್ತೀಚೆಗೆ ಮುರಿದು ಬಿದ್ದಿತ್ತು. ಈ ನಡುವೆ ಆಕೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಾಳೆ ಎಂಬ ವಿಷಯ ತಿಳಿದ ಕುಶಾಲ್ ಆಕೆಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ.</p><p>ಈ ಸಂದೇಶವನ್ನು ಯುವತಿ ಪ್ರಿಯಕರನಿಗೆ ತೋರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆತ ತನ್ನ ಸ್ನೇಹಿತರೊಂದಿಗೆ ಕುಶಾಲ್ನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ ಎನ್ನಲಾಗಿದೆ.</p><p>ಕುಶಾಲ್ನ ಬಟ್ಟೆ ಬಿಚ್ಚಿ, ಮರ್ಮಾಂಗಕ್ಕೆ ತುಳಿದು ಚಿತ್ರಹಿಂಸೆ ನೀಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಅಲ್ಲದೇ, ಆರೋಪಿಯೊಬ್ಬ, ‘ರೇಣಿಕಸ್ವಾಮಿ ಕೊಲೆ ಪ್ರಕರಣದಂತೆ ಇದು ಆಗುತ್ತದೆ’ ಎಂದು ಹೇಳಿರುವುದು ರೆಕಾರ್ಡ್ ಆಗಿದೆ.</p><p>ಚಿತ್ರದುರ್ಗದ ರೇಣುಕಸ್ವಾಮಿ ಎಂಬಾತ ನಟ ದರ್ಶನ್ ತೂಗುದೀಪ ಅವರ ಆಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದು, ನಂತರ ಆ ಪ್ರಕರಣ ಕೊಲೆಯಲ್ಲಿ ಅಂತ್ಯವಾಗಿರುವುದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. </p><p>ರೇಣುಕಸ್ವಾಮಿ ಅವರನ್ನು ಶೆಡ್ವೊಂದಕ್ಕೆ ಕರೆದುಕೊಂಡು ಹೋಗಿದ್ದ ದರ್ಶನ್ ಮತ್ತು ಅವರ ಸ್ನೇಹಿತರು ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p><p>ಈಗ ಅಂತಹದ್ದೇ ಘಟನೆ ಮರುಕಳಿಸಿರುವುದು ಮತ್ತು ಆ ಘಟನೆಯನ್ನು ಸ್ಫೂರ್ತಿಯಾಗಿ ತೆಗೆದುಕೊಂಡಿರುವುದು ಆತಂಕ ಹುಟ್ಟುಹಾಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>