<p>ದೇವನಹಳ್ಳಿ: ಜಿಲ್ಲಾ ಪಂಚಾಯಿತಿಯಿಂದ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸುತ್ತಿರುವ 77 ಕೆರೆಗಳ ಅಂಗಳದಲ್ಲಿ ಗಣರಾಜ್ಯೋತ್ಸವ ಆಚರಣೆ ಆಯೋಜಿಸಿ ರಾಷ್ಟ್ರಧ್ವಜ ಹಾರಿಸಲಾಗಿದೆ ಎಂದು ಜಿ.ಪಂ. ಉಪ ಕಾರ್ಯದರ್ಶಿ ಡಾ.ನಾಗರಾಜ್ ತಿಳಿಸಿದರು.</p>.<p>ವಿಶ್ವನಾಥಪುರ ಗ್ರಾ.ಪಂ.ನಿಂದ ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿ ಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಭೇಟಿ ನೀಡಿ ಮಾತನಾಡಿದರು.</p>.<p>ಅಮೃತ ಸರೋವರ ಯೋಜನೆಯೂ ಜಿಲ್ಲೆಯ ಸಾಂಪ್ರದಾಯಿಕ ಜಲಮೂಲಗಳನ್ನು ಪುನಶ್ಚೇತನಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈಗಾಗಲೇ, ಜಿಲ್ಲೆಯ 77 ಕೆರೆಗಳಿಗೆ ಹೊಸ ರೂಪ ನೀಡಲಾಗಿದೆ. ಈ ವರ್ಷದೊಳಗೆ 150 ಕೆರೆಗಳನ್ನು ಸಂರಕ್ಷಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಮಾಹಿತಿ ನೀಡಿದರು.</p>.<p>ಅಂತರ್ಜಲ ಹೆಚ್ಚಳಕ್ಕೆ ಕ್ರಮ, ಗ್ರಾಮೀಣ ಜಲ ಭದ್ರತೆಯನ್ನು ಗಮನದಲ್ಲಿಸಿಕೊಂಡು ಭವಿಷ್ಯದಲ್ಲಿ ನೀರನ ಬವಣೆ ಪರಿಹರಿಸುವ ಸದುದ್ದೇಶದಿಂದ 2022ರ ಏಪ್ರಿಲ್ನಿಂದಲೇ ಕೆರೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿತ್ತು. ದೇವನಹಳ್ಳಿ 12, ದೊಡ್ಡಬಳ್ಳಾಪುರ 30, ನೆಲಮಂಗಲ 16 ಹಾಗೂ ಹೊಸಕೋಟೆ ತಾಲ್ಲೂಕಿನ 19 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಬಾರಿ ಕೆರೆ ಅಂಗಳದಲ್ಲಿ ಮಾಜಿ ಸೈನಿಕರು, ಹಿರಿಯ ನಾಗರಿಕರಿಂದ ಧ್ವಜಾರೋಹಣ ನೆರವೇರಿಸಲಾಗಿದೆ ಎಂದು ತಿಳಿಸಿದರು.</p>.<p>ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷೆ ಮಂಗಳಾ ನಾರಾಯಣಸ್ವಾಮಿ, ಉಪಾಧ್ಯಕ್ಷ ವಿಜಯ್ ಕುಮಾರ್, ಕಾರ್ಯದರ್ಶಿ ಪದ್ಮಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಜಿಲ್ಲಾ ಪಂಚಾಯಿತಿಯಿಂದ ಅಮೃತ ಸರೋವರ ಯೋಜನೆಯಡಿ ಅಭಿವೃದ್ಧಿಪಡಿಸುತ್ತಿರುವ 77 ಕೆರೆಗಳ ಅಂಗಳದಲ್ಲಿ ಗಣರಾಜ್ಯೋತ್ಸವ ಆಚರಣೆ ಆಯೋಜಿಸಿ ರಾಷ್ಟ್ರಧ್ವಜ ಹಾರಿಸಲಾಗಿದೆ ಎಂದು ಜಿ.ಪಂ. ಉಪ ಕಾರ್ಯದರ್ಶಿ ಡಾ.ನಾಗರಾಜ್ ತಿಳಿಸಿದರು.</p>.<p>ವಿಶ್ವನಾಥಪುರ ಗ್ರಾ.ಪಂ.ನಿಂದ ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿ ಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಭೇಟಿ ನೀಡಿ ಮಾತನಾಡಿದರು.</p>.<p>ಅಮೃತ ಸರೋವರ ಯೋಜನೆಯೂ ಜಿಲ್ಲೆಯ ಸಾಂಪ್ರದಾಯಿಕ ಜಲಮೂಲಗಳನ್ನು ಪುನಶ್ಚೇತನಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈಗಾಗಲೇ, ಜಿಲ್ಲೆಯ 77 ಕೆರೆಗಳಿಗೆ ಹೊಸ ರೂಪ ನೀಡಲಾಗಿದೆ. ಈ ವರ್ಷದೊಳಗೆ 150 ಕೆರೆಗಳನ್ನು ಸಂರಕ್ಷಣೆ ಮಾಡುವ ಗುರಿ ಹೊಂದಿದ್ದೇವೆ ಎಂದು ಮಾಹಿತಿ ನೀಡಿದರು.</p>.<p>ಅಂತರ್ಜಲ ಹೆಚ್ಚಳಕ್ಕೆ ಕ್ರಮ, ಗ್ರಾಮೀಣ ಜಲ ಭದ್ರತೆಯನ್ನು ಗಮನದಲ್ಲಿಸಿಕೊಂಡು ಭವಿಷ್ಯದಲ್ಲಿ ನೀರನ ಬವಣೆ ಪರಿಹರಿಸುವ ಸದುದ್ದೇಶದಿಂದ 2022ರ ಏಪ್ರಿಲ್ನಿಂದಲೇ ಕೆರೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿತ್ತು. ದೇವನಹಳ್ಳಿ 12, ದೊಡ್ಡಬಳ್ಳಾಪುರ 30, ನೆಲಮಂಗಲ 16 ಹಾಗೂ ಹೊಸಕೋಟೆ ತಾಲ್ಲೂಕಿನ 19 ಕೆರೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಬಾರಿ ಕೆರೆ ಅಂಗಳದಲ್ಲಿ ಮಾಜಿ ಸೈನಿಕರು, ಹಿರಿಯ ನಾಗರಿಕರಿಂದ ಧ್ವಜಾರೋಹಣ ನೆರವೇರಿಸಲಾಗಿದೆ ಎಂದು ತಿಳಿಸಿದರು.</p>.<p>ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷೆ ಮಂಗಳಾ ನಾರಾಯಣಸ್ವಾಮಿ, ಉಪಾಧ್ಯಕ್ಷ ವಿಜಯ್ ಕುಮಾರ್, ಕಾರ್ಯದರ್ಶಿ ಪದ್ಮಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>