ಹೊಸಕೋಟೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯು ಬಯಲು ಪ್ರದೇಶವಾಗಿವೆ. ಇಲ್ಲಿ ಮಳೆಯ ಪ್ರಮಾಣ ಕಡಿಮೆ. ಆದ್ದರಿಂದ ರೈತರು ನೀರಿಗಾಗಿ ಬಹಳ ಕಷ್ಟಪಡುತ್ತಿದ್ದು, ನೀರಾವರಿ ಸೌಲಭ್ಯ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಸಂಸದ ಬಿ.ಎನ್. ಬಚ್ಚೇಗೌಡ ತಿಳಿಸಿದರು.