ಜೆಡಿಎಸ್ ನಗರ ಘಟಕ ಅಧ್ಯಕ್ಷ ಮುನಿನಂಜಪ್ಪ ಮಾತನಾಡಿ, ‘ದೇಶ ಸೇವೆಯಲ್ಲಿ ಕರ್ತವ್ಯ ನಿರತ ಯೋಧರು ಹುತಾತ್ಮರಾದ ನಂತರ ಅವರ ಕುಟುಂಬಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾನವೀಯ ನೆಲೆಗಟ್ಟಿನಲ್ಲಿ ಕಾಣಬೇಕು., ಪುಲ್ವಾಮಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಯೋಧರ ಕುಟುಂಬಗಳಿಗೆ ಸರ್ಕಾರ ಒಂದಿಷ್ಟು ಹಣ ನೀಡಿ ಅನುಕೂಲ ಮಾಡುವುದರ ಜೊತೆಗೆ ಯೋಧರ ಸ್ಮಾರಕಗಳಿಗೆ ಕಾಯಕಲ್ಪ ನೀಡಿದರೆ ಯುವ ಸಮುದಾಯಕ್ಕೆ ಸ್ಫೂರ್ತಿ ಸಿಗಲಿದೆ’ ಎಂದು ಹೇಳಿದರು.