ಹೊಸಕೋಟೆ: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿಯೂ ಸಾಧನೆ ಮಾಡುತ್ತಿದ್ದು, ಅವರನ್ನು ಗುರುತಿಸುವ ಕೆಲಸ ಮಾಡಬೇಕಾಗಿದೆ ಎಂದು ಪವಾಡ ಬಯಲು ತಜ್ಞ ಹುಲಿಕಲ್ ನಟರಾಜ್ ಹೇಳಿದರು.
ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ದೇವಲಾಪುರದಲ್ಲಿ ನಡೆದ ಉಷಾ ರಶ್ಮಿ ಟ್ರಸ್ಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷೆ ಉಷಾ ಮಹದೇಶ್ ಮಾತನಾಡಿದರು.
ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಲಕ್ಷ್ಮಣ್ ಸಿಂಗ್, ವೀರಶೈವ ಮಹಾಸಭಾದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದೇವಲಾಪುರ ಸುವರ್ಣ, ಯುವ ಘಟಕದ ಜಿಲ್ಲಾ ಅಧ್ಯಕ್ಷ ಶಶಿಕುಮಾರ್, ಟ್ರಸ್ಟ್ ಪದಾಧಿಕಾರಿಗಳಾದ ಪ್ರಿಯಾಂಕಾ, ಮೇಘನಾ, ಲತಾ ಮುಖಂಡರಾದ ಮಲ್ಲೇಶಪ್ಪ, ಸರೋಜಮ್ಮ, ಮಹದೇಶ್ ಉಪಸ್ಥಿತರಿದ್ದರು.