<p><strong>ವಿಜಯಪುರ(ದೇವನಹಳ್ಳಿ):</strong> ಪುರಸಭೆಯ ನಿವೃತ್ತ ಪೌರಕಾರ್ಮಿಕ 75 ವರ್ಷ ವಯಸ್ಸಿನ ಉಪೇಂದ್ರ ಸ್ವಯಂ ಪ್ರೇರಿತರಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ. </p>.<p>ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಬಾರದು ಎಂಬ ಕಾಳಜಿಯಿಂದ ಚೀಲದೊಳಗೆ ಕಲ್ಲು, ಮಣ್ಣು ತುಂಬಿಕೊಂಡು ಸೈಕಲ್ನಲ್ಲಿ ತಂದು ರಸ್ತೆ ಗುಂಡಿಗಳಿಗೆ ಸುರಿಯುತ್ತಿದ್ದಾರೆ.</p>.<p>ಜಿಟಿ ಮಳೆ ಹಾಗೂ ರಸ್ತೆ ಕಾಮಗಾರಿಯಿಂದ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ವಾಹನ ಸವಾರರ ಅಪಘಾತಕ್ಕೆ ಗುಂಡಿಗಳು ಕಾರಣವಾಗುತ್ತಿವೆ.</p>.<p>ಮಳೆ ಸುರಿದಾಗ ರಸ್ತೆ ಗುಂಡಿಗಳಲ್ಲಿ ನೀರು ಸಂಗ್ರಹ ಆಗುತ್ತಿರುವುದರಿಂದ ವಾಹನ ಸವಾರರು ಜೀವಭಯದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಉಂಟಾಗಿದೆ. </p>.<p>ಮಂಗಳವಾರ ಪಟ್ಟಣದ ಮುಖ್ಯರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿದ ಉಪೇಂದ್ರ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪುರಸಭೆ ನಿರ್ಲಕ್ಷ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಮಳೆಯಿಂದ ರಸ್ತೆಗಳು ಕೆಸರುಗದ್ದೆಯಾಗಿದೆ. ಮುಖ್ಯ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರ ಅಪಘಾತ ಹೆಚ್ಚಳವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿರುವುದು ಬೇಸರದ ಸಂಗತಿ’ ಎಂದು ಉಪೇಂದ್ರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ):</strong> ಪುರಸಭೆಯ ನಿವೃತ್ತ ಪೌರಕಾರ್ಮಿಕ 75 ವರ್ಷ ವಯಸ್ಸಿನ ಉಪೇಂದ್ರ ಸ್ವಯಂ ಪ್ರೇರಿತರಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ. </p>.<p>ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಬಾರದು ಎಂಬ ಕಾಳಜಿಯಿಂದ ಚೀಲದೊಳಗೆ ಕಲ್ಲು, ಮಣ್ಣು ತುಂಬಿಕೊಂಡು ಸೈಕಲ್ನಲ್ಲಿ ತಂದು ರಸ್ತೆ ಗುಂಡಿಗಳಿಗೆ ಸುರಿಯುತ್ತಿದ್ದಾರೆ.</p>.<p>ಜಿಟಿ ಮಳೆ ಹಾಗೂ ರಸ್ತೆ ಕಾಮಗಾರಿಯಿಂದ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ವಾಹನ ಸವಾರರ ಅಪಘಾತಕ್ಕೆ ಗುಂಡಿಗಳು ಕಾರಣವಾಗುತ್ತಿವೆ.</p>.<p>ಮಳೆ ಸುರಿದಾಗ ರಸ್ತೆ ಗುಂಡಿಗಳಲ್ಲಿ ನೀರು ಸಂಗ್ರಹ ಆಗುತ್ತಿರುವುದರಿಂದ ವಾಹನ ಸವಾರರು ಜೀವಭಯದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಉಂಟಾಗಿದೆ. </p>.<p>ಮಂಗಳವಾರ ಪಟ್ಟಣದ ಮುಖ್ಯರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿದ ಉಪೇಂದ್ರ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪುರಸಭೆ ನಿರ್ಲಕ್ಷ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಮಳೆಯಿಂದ ರಸ್ತೆಗಳು ಕೆಸರುಗದ್ದೆಯಾಗಿದೆ. ಮುಖ್ಯ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರ ಅಪಘಾತ ಹೆಚ್ಚಳವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿರುವುದು ಬೇಸರದ ಸಂಗತಿ’ ಎಂದು ಉಪೇಂದ್ರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>