<p><strong>ಚಿಂತಾಮಣಿ:</strong> ಚಿತ್ತೂರು ಜಿಲ್ಲೆಯ ರೋಂಚೆರ್ಲು ಸಮೀಪದ ಚಿಂತಾಮಣಿ-ತಿರುಪತಿ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ತಾಯಿ–ಮಗ ರಸ್ತೆ ಉಬ್ಬಿನಲ್ಲಿ ಬಳಿ ಆಯ ತಪ್ಪಿ ಕೆಳಗೆ ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಸವಾರ ಗಾಯಗೊಂಡಿದ್ದಾರೆ.</p>.<p>ನಗರದ ನಾರಸಿಂಹಪೇಟೆಯ ನಿವಾಸಿ ವೆಂಕಟೇಶ್ ಅವರ ಪತ್ನಿ ಸವಿತ(56) ಮೃತರು. ಆಕೆಯ ಪುತ್ರ ಚಂದನ್ ಗಾಯಗೊಂಡವರು.</p>.<p>ಸವಿತಾ ಅವರು ನಗರದ ಧನುಷ್ ಮಹಿಳಾ ಮಂಡಳಿಯ ಸದಸ್ಯೆಯಾಗಿದ್ದು, ವಿವಿಧ ದೇವಾಲಯಗಳ ಭಜನೆ ಹಾಗೂ ವಿಷ್ಣುಸಹಸ್ರನಾಮ ಪಠಣೆಯಲ್ಲಿ ಭಾಗವಹಿಸುತ್ತಿದ್ದರು. ಶನಿವಾರ ತಿರುಪತಿಯ ದೇವಾಲಯವೊಂದರಲ್ಲಿ ವಿಷ್ಣುಸಹಸ್ರನಾಮ ಪಠಣೆಯಲ್ಲಿ ಭಾಗವಹಿಸಲು ಹಾಗೂ ತಿರುಮಲದಲ್ಲಿ ದರ್ಶನ ಪಡೆಯಲು ತಾಯಿ–ಮಗ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.</p>.<p>ರಸ್ತೆ ಉಬ್ಬಿನಲ್ಲಿ ಬೈಕ್ ಜಿಗಿದಾಗ ಹಿಂಬದಿ ಕುಳಿತಿದ್ದ ಸವಿತ ಆಯ ತಪ್ಪಿ ಕೆಳಗೆ ಬಿದ್ದು, ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಪೀಲೇರು ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಪೀಲೇರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ.</p>.<p>ಭಾನುವಾರ ಮೃತಳ ಪಾರ್ಥಿವ ಶರೀರವನ್ನು ನಗರಕ್ಕೆ ತರಲಾಗಿದ್ದು,ಅವರ ಮನೆಯ ಮುಂದೆ ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿತ್ತು. ಮಧ್ಯಾಹ್ನ ನಗರದ ಬೆಂಗಳೂರು ರಸ್ತೆಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಚಿತ್ತೂರು ಜಿಲ್ಲೆಯ ರೋಂಚೆರ್ಲು ಸಮೀಪದ ಚಿಂತಾಮಣಿ-ತಿರುಪತಿ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ತಾಯಿ–ಮಗ ರಸ್ತೆ ಉಬ್ಬಿನಲ್ಲಿ ಬಳಿ ಆಯ ತಪ್ಪಿ ಕೆಳಗೆ ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಸವಾರ ಗಾಯಗೊಂಡಿದ್ದಾರೆ.</p>.<p>ನಗರದ ನಾರಸಿಂಹಪೇಟೆಯ ನಿವಾಸಿ ವೆಂಕಟೇಶ್ ಅವರ ಪತ್ನಿ ಸವಿತ(56) ಮೃತರು. ಆಕೆಯ ಪುತ್ರ ಚಂದನ್ ಗಾಯಗೊಂಡವರು.</p>.<p>ಸವಿತಾ ಅವರು ನಗರದ ಧನುಷ್ ಮಹಿಳಾ ಮಂಡಳಿಯ ಸದಸ್ಯೆಯಾಗಿದ್ದು, ವಿವಿಧ ದೇವಾಲಯಗಳ ಭಜನೆ ಹಾಗೂ ವಿಷ್ಣುಸಹಸ್ರನಾಮ ಪಠಣೆಯಲ್ಲಿ ಭಾಗವಹಿಸುತ್ತಿದ್ದರು. ಶನಿವಾರ ತಿರುಪತಿಯ ದೇವಾಲಯವೊಂದರಲ್ಲಿ ವಿಷ್ಣುಸಹಸ್ರನಾಮ ಪಠಣೆಯಲ್ಲಿ ಭಾಗವಹಿಸಲು ಹಾಗೂ ತಿರುಮಲದಲ್ಲಿ ದರ್ಶನ ಪಡೆಯಲು ತಾಯಿ–ಮಗ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.</p>.<p>ರಸ್ತೆ ಉಬ್ಬಿನಲ್ಲಿ ಬೈಕ್ ಜಿಗಿದಾಗ ಹಿಂಬದಿ ಕುಳಿತಿದ್ದ ಸವಿತ ಆಯ ತಪ್ಪಿ ಕೆಳಗೆ ಬಿದ್ದು, ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಪೀಲೇರು ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಪೀಲೇರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ.</p>.<p>ಭಾನುವಾರ ಮೃತಳ ಪಾರ್ಥಿವ ಶರೀರವನ್ನು ನಗರಕ್ಕೆ ತರಲಾಗಿದ್ದು,ಅವರ ಮನೆಯ ಮುಂದೆ ಸಾರ್ವಜನಿಕ ದರ್ಶನಕ್ಕಾಗಿ ಇಡಲಾಗಿತ್ತು. ಮಧ್ಯಾಹ್ನ ನಗರದ ಬೆಂಗಳೂರು ರಸ್ತೆಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>