ದೊಡ್ಡಬಳ್ಳಾಪುರ:ಲಾರಿ ಮತ್ತು ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕೊಂಗಾಡಿಯಪ್ಪ ಕಾಲೇಜು ಬಳಿ ಬುಧವಾರ ರಾತ್ರಿ ನಡೆದಿದೆ.
ಸಂಜಯನಗರ ನಿವಾಸಿ ಹರೀಶ್ ಮೃತಪಟ್ಟವರು.
ಈತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುನಲ್ಲಿ ವ್ಯಾಸಂಗ ಮಾಡುತ್ತಿದ್ದ. ದ್ವಿಚಕ್ರವಾಹನದಲ್ಲಿ ತೆರಳುವ ವೇಳೆ ಉಂಟಾದ ಅಪಘಾತದಲ್ಲಿ ನೆಲಕ್ಕೆ ಬಿದ್ದ ಆತನ ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖ ಲಾಗಿದೆ.