<p><strong>ಆನೇಕಲ್</strong>: ತಾಲ್ಲೂಕಿನ ಜಿಗಣಿ-ಬನ್ನೇರುಘಟ್ಟ ರಸ್ತೆಯ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳದಿರುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಮಳೆ ಬಂದರೆ ಜನರು ಕೆಸರು ಗದ್ದೆಯಲ್ಲಿ ಸಂಚರಿಸುವಂತಾಗುತ್ತದೆ. ದ್ವಿಚಕ್ರ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಈಚೆಗೆ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ತುಂಬಿದೆ. ರಸ್ತೆಯ ಗುಂಡಿಗಳಲ್ಲಿಯೂ ನೀರು ತುಂಬಿರುವುದರಿಂದ ವಾಹನ ಸವಾರರು ಗುಂಡಿಗಳಲ್ಲಿ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರು ತಿಂಗಳಿಗೂ ಹೆಚ್ಚು ಕಾಲ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ಜಿಗಣಿ-ಬನ್ನೇರುಘಟ್ಟ ರಸ್ತೆಯು ಮಳೆ ಬಂದರೆ ಕೆಸರು ಗದ್ದೆಯಾಗಿ ಬದಲಾಗುತ್ತದೆ.</p>.<p>ರಸ್ತೆಯ ಒಂದು ಭಾಗದಲ್ಲಿ ಕಾಮಗಾರಿ ನಡೆಯುತ್ತಿದ್ದರೆ ಮತ್ತೊಂದು ಭಾಗದಲ್ಲಿ ಮಳೆಯಿಂದಾಗಿ ನೀರು ತುಂಬಿದೆ. ಗುಂಡಿಗಳಿಂದ ತುಂಬಿರುವ ಈ ರಸ್ತೆಯಲ್ಲಿ ಪ್ರಯಾಣಿಸುವುದು ಸರ್ಕಸ್ ಮಾಡಿದಂತಾಗುತ್ತದೆ. ಸುಮಾರು ಐದು ಕಿ.ಮೀ.ಗೂ ಹೆಚ್ಚು ದೂರ ಇದೇ ಪರಿಸ್ಥಿತಿಯಿದೆ.</p>.<p>ಕೈಗಾರಿಕಾ ಪ್ರದೇಶವಾಗಿರುವ ಜಿಗಣಿಯಲ್ಲಿ ವಿವಿಧ ಕಾರ್ಖಾನೆಗಳಿವೆ. ಪ್ರತಿನಿತ್ಯ ಸಾವಿರಾರು ಮಂದಿ ಇದೇ ರಸ್ತೆಯಲ್ಲಿ ಸಂಚರಿಸಬೇಕು. ಮಳೆ ಬಂದರಂತೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿದಿನ ಉದ್ಯೋಗಕ್ಕಾಗಿ ಇದೇ ರಸ್ತೆಯಲ್ಲಿ ಸಂಚರಿಸುವ ಜಂಗಾಲ್ಪಾಳ್ಯದ ಗಂಗಯ್ಯ ಅಲವತ್ತುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ತಾಲ್ಲೂಕಿನ ಜಿಗಣಿ-ಬನ್ನೇರುಘಟ್ಟ ರಸ್ತೆಯ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳದಿರುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಮಳೆ ಬಂದರೆ ಜನರು ಕೆಸರು ಗದ್ದೆಯಲ್ಲಿ ಸಂಚರಿಸುವಂತಾಗುತ್ತದೆ. ದ್ವಿಚಕ್ರ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಈಚೆಗೆ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ತುಂಬಿದೆ. ರಸ್ತೆಯ ಗುಂಡಿಗಳಲ್ಲಿಯೂ ನೀರು ತುಂಬಿರುವುದರಿಂದ ವಾಹನ ಸವಾರರು ಗುಂಡಿಗಳಲ್ಲಿ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರು ತಿಂಗಳಿಗೂ ಹೆಚ್ಚು ಕಾಲ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ಜಿಗಣಿ-ಬನ್ನೇರುಘಟ್ಟ ರಸ್ತೆಯು ಮಳೆ ಬಂದರೆ ಕೆಸರು ಗದ್ದೆಯಾಗಿ ಬದಲಾಗುತ್ತದೆ.</p>.<p>ರಸ್ತೆಯ ಒಂದು ಭಾಗದಲ್ಲಿ ಕಾಮಗಾರಿ ನಡೆಯುತ್ತಿದ್ದರೆ ಮತ್ತೊಂದು ಭಾಗದಲ್ಲಿ ಮಳೆಯಿಂದಾಗಿ ನೀರು ತುಂಬಿದೆ. ಗುಂಡಿಗಳಿಂದ ತುಂಬಿರುವ ಈ ರಸ್ತೆಯಲ್ಲಿ ಪ್ರಯಾಣಿಸುವುದು ಸರ್ಕಸ್ ಮಾಡಿದಂತಾಗುತ್ತದೆ. ಸುಮಾರು ಐದು ಕಿ.ಮೀ.ಗೂ ಹೆಚ್ಚು ದೂರ ಇದೇ ಪರಿಸ್ಥಿತಿಯಿದೆ.</p>.<p>ಕೈಗಾರಿಕಾ ಪ್ರದೇಶವಾಗಿರುವ ಜಿಗಣಿಯಲ್ಲಿ ವಿವಿಧ ಕಾರ್ಖಾನೆಗಳಿವೆ. ಪ್ರತಿನಿತ್ಯ ಸಾವಿರಾರು ಮಂದಿ ಇದೇ ರಸ್ತೆಯಲ್ಲಿ ಸಂಚರಿಸಬೇಕು. ಮಳೆ ಬಂದರಂತೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿದಿನ ಉದ್ಯೋಗಕ್ಕಾಗಿ ಇದೇ ರಸ್ತೆಯಲ್ಲಿ ಸಂಚರಿಸುವ ಜಂಗಾಲ್ಪಾಳ್ಯದ ಗಂಗಯ್ಯ ಅಲವತ್ತುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>