ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಸರುಗದ್ದೆಯಾದ ಜಿಗಣಿ-ಬನ್ನೇರುಘಟ್ಟ ರಸ್ತೆ

Last Updated 3 ಸೆಪ್ಟೆಂಬರ್ 2020, 8:32 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಜಿಗಣಿ-ಬನ್ನೇರುಘಟ್ಟ ರಸ್ತೆಯ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳದಿರುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಮಳೆ ಬಂದರೆ ಜನರು ಕೆಸರು ಗದ್ದೆಯಲ್ಲಿ ಸಂಚರಿಸುವಂತಾಗುತ್ತದೆ. ದ್ವಿಚಕ್ರ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈಚೆಗೆ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ತುಂಬಿದೆ. ರಸ್ತೆಯ ಗುಂಡಿಗಳಲ್ಲಿಯೂ ನೀರು ತುಂಬಿರುವುದರಿಂದ ವಾಹನ ಸವಾರರು ಗುಂಡಿಗಳಲ್ಲಿ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರು ತಿಂಗಳಿಗೂ ಹೆಚ್ಚು ಕಾಲ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ಜಿಗಣಿ-ಬನ್ನೇರುಘಟ್ಟ ರಸ್ತೆಯು ಮಳೆ ಬಂದರೆ ಕೆಸರು ಗದ್ದೆಯಾಗಿ ಬದಲಾಗುತ್ತದೆ.

ರಸ್ತೆಯ ಒಂದು ಭಾಗದಲ್ಲಿ ಕಾಮಗಾರಿ ನಡೆಯುತ್ತಿದ್ದರೆ ಮತ್ತೊಂದು ಭಾಗದಲ್ಲಿ ಮಳೆಯಿಂದಾಗಿ ನೀರು ತುಂಬಿದೆ. ಗುಂಡಿಗಳಿಂದ ತುಂಬಿರುವ ಈ ರಸ್ತೆಯಲ್ಲಿ ಪ್ರಯಾಣಿಸುವುದು ಸರ್ಕಸ್‌ ಮಾಡಿದಂತಾಗುತ್ತದೆ. ಸುಮಾರು ಐದು ಕಿ.ಮೀ.ಗೂ ಹೆಚ್ಚು ದೂರ ಇದೇ ಪರಿಸ್ಥಿತಿಯಿದೆ.

ಕೈಗಾರಿಕಾ ಪ್ರದೇಶವಾಗಿರುವ ಜಿಗಣಿಯಲ್ಲಿ ವಿವಿಧ ಕಾರ್ಖಾನೆಗಳಿವೆ. ಪ್ರತಿನಿತ್ಯ ಸಾವಿರಾರು ಮಂದಿ ಇದೇ ರಸ್ತೆಯಲ್ಲಿ ಸಂಚರಿಸಬೇಕು. ಮಳೆ ಬಂದರಂತೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿದಿನ ಉದ್ಯೋಗಕ್ಕಾಗಿ ಇದೇ ರಸ್ತೆಯಲ್ಲಿ ಸಂಚರಿಸುವ ಜಂಗಾಲ್‌ಪಾಳ್ಯದ ಗಂಗಯ್ಯ ಅಲವತ್ತುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT