<p><strong>ಸೂಲಿಬೆಲೆ:</strong> ಇಟ್ಟಸಂದ್ರ, ಕಂಬಳೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ವರ್ಷಗಳಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿದ್ದವು. ಈ ಗ್ರಾಮಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿಯ ಈಸ್ತೂರು, ಚೀಮಸಂದ್ರ, ಅನುಪಹಳ್ಳಿ, ತಮರಸನಹಳ್ಳಿ, ದೊಡ್ಡಹರಳಗೆರೆ, ಶಶಿಮಾಕನಹಳ್ಳಿ, ಟಿ.ಅಗ್ರಹಾರ ಗ್ರಾಮಗಳಲ್ಲಿ ಸುಮಾರು ₹ 1 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಮಾದರಿ ತಾಲ್ಲೂಕನ್ನಾಗಿ ರೂಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ.ನಿನ್ನೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಹೊಸಕೋಟೆ ನಗರದಲ್ಲಿ ಸ್ವಯಂಪ್ರೇರಿತ ‘ಲಾಕ್ ಡೌನ್’ ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ಪಟ್ಟಣಕ್ಕೆ ಬರುವುದನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಹೊಸಕೋಟೆ ಟಿಎಪಿಸಿಎಂಎಸ್ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ, ಸೂಲಿಬೆಲೆ ಸಹಕಾರ ಬ್ಯಾಂಕ್ ಅಧ್ಯಕ್ಷ ಸತೀಶಗೌಡ, ಉಪಾಧ್ಯಕ್ಷ ಮುನಿಯಪ್ಪ, ನಿರ್ದೇಶಕರಾದ ಎ.ನಾರಾಯಣಪ್ಪ, ಮುನಿಶ್ಯಾಮಿಗೌಡ ಇಟ್ಟಸಂದ್ರ ಬಿ.ಗೋಪಾಲ್, ಭುವನಹಳ್ಳಿ ಗೋಪಾಲಪ್ಪ, ತಾ.ಪಂ.ಸದಸ್ಯ ಡಿ.ಟಿ.ವೆಂಕಟೇಶ್, ನಾಗರಾಜಪ್ಪ, ಗ್ರಾ.ಪಂ. ಸದಸ್ಯ ಅಂಜದ್ ಬೇಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ:</strong> ಇಟ್ಟಸಂದ್ರ, ಕಂಬಳೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ವರ್ಷಗಳಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿದ್ದವು. ಈ ಗ್ರಾಮಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ಸೂಲಿಬೆಲೆ ಹೋಬಳಿಯ ಈಸ್ತೂರು, ಚೀಮಸಂದ್ರ, ಅನುಪಹಳ್ಳಿ, ತಮರಸನಹಳ್ಳಿ, ದೊಡ್ಡಹರಳಗೆರೆ, ಶಶಿಮಾಕನಹಳ್ಳಿ, ಟಿ.ಅಗ್ರಹಾರ ಗ್ರಾಮಗಳಲ್ಲಿ ಸುಮಾರು ₹ 1 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಮಾದರಿ ತಾಲ್ಲೂಕನ್ನಾಗಿ ರೂಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ.ನಿನ್ನೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಹೊಸಕೋಟೆ ನಗರದಲ್ಲಿ ಸ್ವಯಂಪ್ರೇರಿತ ‘ಲಾಕ್ ಡೌನ್’ ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ಪಟ್ಟಣಕ್ಕೆ ಬರುವುದನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಹೊಸಕೋಟೆ ಟಿಎಪಿಸಿಎಂಎಸ್ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ, ಸೂಲಿಬೆಲೆ ಸಹಕಾರ ಬ್ಯಾಂಕ್ ಅಧ್ಯಕ್ಷ ಸತೀಶಗೌಡ, ಉಪಾಧ್ಯಕ್ಷ ಮುನಿಯಪ್ಪ, ನಿರ್ದೇಶಕರಾದ ಎ.ನಾರಾಯಣಪ್ಪ, ಮುನಿಶ್ಯಾಮಿಗೌಡ ಇಟ್ಟಸಂದ್ರ ಬಿ.ಗೋಪಾಲ್, ಭುವನಹಳ್ಳಿ ಗೋಪಾಲಪ್ಪ, ತಾ.ಪಂ.ಸದಸ್ಯ ಡಿ.ಟಿ.ವೆಂಕಟೇಶ್, ನಾಗರಾಜಪ್ಪ, ಗ್ರಾ.ಪಂ. ಸದಸ್ಯ ಅಂಜದ್ ಬೇಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>