<p><strong>ಆನೇಕಲ್: </strong>ತಾಲ್ಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಗಿಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಕೃಷ್ಣಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು. ತಾಲ್ಲೂಕಿನ ಬೇಗಿಹಳ್ಳಿ, ಮೆಳೆನಲ್ಲಸಂದ್ರ-ರಾಮಸಂದ್ರ, ಕೊಪ್ಪ ಮುಖ್ಯ ರಸ್ತೆ ಅಭಿವೃದ್ಧಿ ನಡೆಯಲಿದೆ.</p>.<p>ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಯಿಂದ ಸ್ಥಳೀಯ ಗ್ರಾಮಗಳ ಪ್ರತಿನಿತ್ಯದ ಓಡಾಟಕ್ಕೆ ಯಾವುದೇ ತೊಂದರೆಗಳಾಗುವುದಿಲ್ಲ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಜಿಗಣಿ-ಬನ್ನೇರುಘಟ್ಟ ಮಾರ್ಗವಾಗಿ ಬೆಂಗಳೂರಿಗೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆ ದಟ್ಟಣೆ ಸಮಸ್ಯೆಯ ಪರಿಹಾರಕ್ಕೆ ಸಂಚಾರ ಪೊಲೀಸ್ ಠಾಣೆಯ ಅವಶ್ಯಕ ಇದೆ. ಗೃಹ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಗುವುದು. ಇದರಿಂದಾಗಿ ಈ ಭಾಗದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಹರಿಸಲು ಉಪಯುಕ್ತವಾಗುತ್ತದೆ ಎಂದು ತಿಳಿಸಿದರು.</p>.<p>ಮುಖಂಡರಾದ ಯಾರಂಡಹಳ್ಳಿ ಹರೀಶ್ ರೆಡ್ಡಿ, ಕೊಪ್ಪ ಮುನಿರಾಜು, ಶಶಿಕುಮಾರ್, ಯತಿರಾಜ್, ಸುಜಾತ, ರಘುರಾಮ್, ಚೌಡಪ್ಪ, ಅಶ್ವಥಪ್ಪ, ಮಂಜುನಾಥ್, ನಾಗೇಂದ್ರ, ರಮೇಶ್, ಕೇಶವ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇಗಿಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಕೃಷ್ಣಪ್ಪ ಅವರು ಭೂಮಿ ಪೂಜೆ ನೆರವೇರಿಸಿದರು. ತಾಲ್ಲೂಕಿನ ಬೇಗಿಹಳ್ಳಿ, ಮೆಳೆನಲ್ಲಸಂದ್ರ-ರಾಮಸಂದ್ರ, ಕೊಪ್ಪ ಮುಖ್ಯ ರಸ್ತೆ ಅಭಿವೃದ್ಧಿ ನಡೆಯಲಿದೆ.</p>.<p>ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿಯಿಂದ ಸ್ಥಳೀಯ ಗ್ರಾಮಗಳ ಪ್ರತಿನಿತ್ಯದ ಓಡಾಟಕ್ಕೆ ಯಾವುದೇ ತೊಂದರೆಗಳಾಗುವುದಿಲ್ಲ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಜಿಗಣಿ-ಬನ್ನೇರುಘಟ್ಟ ಮಾರ್ಗವಾಗಿ ಬೆಂಗಳೂರಿಗೆ ತೆರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆ ದಟ್ಟಣೆ ಸಮಸ್ಯೆಯ ಪರಿಹಾರಕ್ಕೆ ಸಂಚಾರ ಪೊಲೀಸ್ ಠಾಣೆಯ ಅವಶ್ಯಕ ಇದೆ. ಗೃಹ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಲಾಗುವುದು. ಇದರಿಂದಾಗಿ ಈ ಭಾಗದ ಸಂಚಾರ ದಟ್ಟಣೆ ಸಮಸ್ಯೆಯನ್ನು ಪರಿಹರಿಸಲು ಉಪಯುಕ್ತವಾಗುತ್ತದೆ ಎಂದು ತಿಳಿಸಿದರು.</p>.<p>ಮುಖಂಡರಾದ ಯಾರಂಡಹಳ್ಳಿ ಹರೀಶ್ ರೆಡ್ಡಿ, ಕೊಪ್ಪ ಮುನಿರಾಜು, ಶಶಿಕುಮಾರ್, ಯತಿರಾಜ್, ಸುಜಾತ, ರಘುರಾಮ್, ಚೌಡಪ್ಪ, ಅಶ್ವಥಪ್ಪ, ಮಂಜುನಾಥ್, ನಾಗೇಂದ್ರ, ರಮೇಶ್, ಕೇಶವ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>