<p><strong>ಹೊಸಕೋಟೆ</strong>: ‘66 ವರ್ಷಗಳ ಹಿಂದೆ ಸ್ಥಾಪಿತವಾದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ಸಮಾಜ ಸುಧಾರಣೆಗಾಗಿ ಹಲವು ಚಿಂತಕರ ತತ್ವಾದರ್ಶದಂತೆ ಕೆಲಸ ಮಾಡುತ್ತಿದೆ. ಇದೊಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯಲು ಸಿದ್ಧಗೊಂಡಿದೆ’ ಎಂದು ಆರ್ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ. ವೆಂಕಟಸ್ವಾಮಿ ತಿಳಿಸಿದರು.</p>.<p>ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷ ಎರಡು ಇದ್ದರಷ್ಟೇ ಪ್ರಜಾತಂತ್ರ ವ್ಯವಸ್ಥೆಯ ಉಳಿವು ಸಾಧ್ಯ. ರಾಮ ಮನೋಹರ ಲೋಹಿಯಾ, ಪೆರಿಯಾರ್ ರಾಮಸ್ವಾಮಿ ಅವರ ಮಾತುಗಳು ರಾಜಕೀಯ ಚಿಂತನೆಯಾಗಿ ಮಾರ್ಪಾಡು ಆಗಬೇಕಿದೆ<br />ಎಂದರು.</p>.<p>ಪಕ್ಷದ ತಾಲ್ಲೂಕು ಅಧ್ಯಕ್ಷ ದರ್ಶನ್ ಮಾತನಾಡಿ, ಸಾರಿಗೆ ನೌಕರರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರ ಹೋರಾಟವನ್ನು ಪಕ್ಷ ಬೆಂಬಲಿಸುತ್ತದೆ. ಸರ್ಕಾರದ ಭ್ರಷ್ಟ ವ್ಯವಸ್ಥೆಯನ್ನು ಧಿಕ್ಕರಿಸಿ ಸುಂದರ ಸಮಾಜ ನಿರ್ಮಾಣ ಮಾಡುವುದು ನಮ್ಮ ಧ್ಯೇಯ ಎಂದು ತಿಳಿಸಿದರು.</p>.<p>ಪಕ್ಷದ ಮುಖಂಡ ಲಘುಮಯ್ಯ, ಜಿಲ್ಲಾ ಕಾರ್ಯಧ್ಯಕ್ಷ ಎ. ಮುನಿರಾಜು, ದಲಿತ ಸಂಘಟನೆ ಸಮಿತಿಯ ರಾಜ್ಯ ಸಂಯೋಜಕರಾದ ಅಶ್ವಥ್, ವೆಂಕಟರಮಣಪ್ಪ, ಮುಖಂಡರಾದ ಉಮಲು ನಾಗರಾಜ್, ಚಂದ್ರಶೇಖರ್, ಅಮ್ಜದ್, ರೂಪಕಲಾ, ರವಿ, ವಿಜಯೇಂದ್ರ, ರಾಜಪ್ಪ, ಅಪ್ಪಸಂದ್ರ ನಾಗೇಶ್ ಹಾಗೂ ಮುಖಂಡರು<br />ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ‘66 ವರ್ಷಗಳ ಹಿಂದೆ ಸ್ಥಾಪಿತವಾದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ) ಸಮಾಜ ಸುಧಾರಣೆಗಾಗಿ ಹಲವು ಚಿಂತಕರ ತತ್ವಾದರ್ಶದಂತೆ ಕೆಲಸ ಮಾಡುತ್ತಿದೆ. ಇದೊಂದು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯಲು ಸಿದ್ಧಗೊಂಡಿದೆ’ ಎಂದು ಆರ್ಪಿಐ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ. ವೆಂಕಟಸ್ವಾಮಿ ತಿಳಿಸಿದರು.</p>.<p>ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷ ಎರಡು ಇದ್ದರಷ್ಟೇ ಪ್ರಜಾತಂತ್ರ ವ್ಯವಸ್ಥೆಯ ಉಳಿವು ಸಾಧ್ಯ. ರಾಮ ಮನೋಹರ ಲೋಹಿಯಾ, ಪೆರಿಯಾರ್ ರಾಮಸ್ವಾಮಿ ಅವರ ಮಾತುಗಳು ರಾಜಕೀಯ ಚಿಂತನೆಯಾಗಿ ಮಾರ್ಪಾಡು ಆಗಬೇಕಿದೆ<br />ಎಂದರು.</p>.<p>ಪಕ್ಷದ ತಾಲ್ಲೂಕು ಅಧ್ಯಕ್ಷ ದರ್ಶನ್ ಮಾತನಾಡಿ, ಸಾರಿಗೆ ನೌಕರರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರ ಹೋರಾಟವನ್ನು ಪಕ್ಷ ಬೆಂಬಲಿಸುತ್ತದೆ. ಸರ್ಕಾರದ ಭ್ರಷ್ಟ ವ್ಯವಸ್ಥೆಯನ್ನು ಧಿಕ್ಕರಿಸಿ ಸುಂದರ ಸಮಾಜ ನಿರ್ಮಾಣ ಮಾಡುವುದು ನಮ್ಮ ಧ್ಯೇಯ ಎಂದು ತಿಳಿಸಿದರು.</p>.<p>ಪಕ್ಷದ ಮುಖಂಡ ಲಘುಮಯ್ಯ, ಜಿಲ್ಲಾ ಕಾರ್ಯಧ್ಯಕ್ಷ ಎ. ಮುನಿರಾಜು, ದಲಿತ ಸಂಘಟನೆ ಸಮಿತಿಯ ರಾಜ್ಯ ಸಂಯೋಜಕರಾದ ಅಶ್ವಥ್, ವೆಂಕಟರಮಣಪ್ಪ, ಮುಖಂಡರಾದ ಉಮಲು ನಾಗರಾಜ್, ಚಂದ್ರಶೇಖರ್, ಅಮ್ಜದ್, ರೂಪಕಲಾ, ರವಿ, ವಿಜಯೇಂದ್ರ, ರಾಜಪ್ಪ, ಅಪ್ಪಸಂದ್ರ ನಾಗೇಶ್ ಹಾಗೂ ಮುಖಂಡರು<br />ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>