ಆನೇಕಲ್: ತಾಲ್ಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿ, ಚರಂಡಿ, ಕೆರೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು ₹ 838 ಕೋಟಿ ಬಿಡುಗಡೆಯಾಗಿದೆ. ಈ ಕಾಮಗಾರಿಗಳ ಪೈಕಿ ಶೇಕಡ 25ರಷ್ಟು ಕಾಮಗಾರಿಯೂ ನಡೆದಿಲ್ಲ. ಸರ್ಕಾರದಿಂದ ಬಿಡುಗಡೆಯಾದ ಹಣವನ್ನು ಸ್ಥಳೀಯ ಶಾಸಕರ ಹಿಂಬಾಲಕರು, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಆರೋಪಿಸಿದರು.