<p><strong>ಆನೇಕಲ್: </strong>ತಾಲ್ಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿ, ಚರಂಡಿ, ಕೆರೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು ₹ 838 ಕೋಟಿ ಬಿಡುಗಡೆಯಾಗಿದೆ. ಈ ಕಾಮಗಾರಿಗಳ ಪೈಕಿ ಶೇಕಡ 25ರಷ್ಟು ಕಾಮಗಾರಿಯೂ ನಡೆದಿಲ್ಲ. ಸರ್ಕಾರದಿಂದ ಬಿಡುಗಡೆಯಾದ ಹಣವನ್ನು ಸ್ಥಳೀಯ ಶಾಸಕರ ಹಿಂಬಾಲಕರು, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಆರೋಪಿಸಿದರು.</p>.<p>ತಾಲ್ಲೂಕಿನ ಚಂದಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅವ್ಯವಹಾರ ಸಂಬಂಧ ಸುಮಾರು 5,700 ಪುಟಗಳ ದಾಖಲೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಆನೇಕಲ್ ಯೋಜನಾ ಪ್ರಾಧಿಕಾರದಿಂದ 2014-15ರಿಂದ 2019-20ರ ಅವಧಿಯಲ್ಲಿ ಒಟ್ಟು ₹ 576.57 ಕೋಟಿ ಅನುದಾನ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿದೆ. ಇಷ್ಟೊಂದು ಬೃಹತ್ ಪ್ರಮಾಣದ ಹಣ ವಾಸ್ತವವಾಗಿ ವೆಚ್ಚವಾಗಿದ್ದರೆ ರಸ್ತೆಗಳು ಸಿಂಗಾಪುರದ ರಸ್ತೆಗಳಂತೆ ಕಂಗೊಳಿಸಬೇಕಾಗಿತ್ತು. 227 ತಾಲ್ಲೂಕುಗಳ ಪೈಕಿ ಮಾದರಿ ತಾಲ್ಲೂಕಾಗಬೇಕಾಗಿತ್ತು. ಆದರೆ, ಪ್ರಾಧಿಕಾರದ ಅಧಿಕಾರಿಗಳು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು.</p>.<p>ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದಾಗಿ ಹೇಳುವ ಅಧಿಕಾರಿಗಳು ಗುಣಮಟ್ಟ ನಿಯಂತ್ರಣ ಇಲಾಖೆಯಿಂದ ಯಾವುದೇ ಕಾಮಗಾರಿಗೂ ದೃಢೀಕರಣ ಪತ್ರ ಪಡೆದಿಲ್ಲ. ಶೇಕಡ 75ರಷ್ಟು ಅನುದಾನ ದೋಚಲಾಗಿದೆ ಎಂದು ವಿವರಿಸಿದರು.</p>.<p>ತಾಲ್ಲೂಕಿನ 69 ಕೆರೆಗಳಿಗೆ ನೀರು ತುಂಬುವ ಸುಮಾರು ₹ 260.61ಕೋಟಿ ಮೊತ್ತದ ಕಾಮಗಾರಿಗಳಲ್ಲೂ ಅವ್ಯವಹಾರ ನಡೆದಿದೆ. ಟೆಂಡರ್ ಪಡೆದಿರುವ ಮೇಘ ಎಂಜಿನಿಯರಿಂಗ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಸಂಸ್ಥೆಯು ಟೆಂಡರ್ ನಿಯಮದಂತೆ ಮಳೆಗಾಲವೂ ಸೇರಿದಂತೆ 15 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ, 41 ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ದೂರಿದರು.</p>.<p>ಅತ್ತಿಬೆಲೆ ಮಂಡಲ ಬಿಜೆಪಿ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್, ಮುಖಂಡ ಎನ್. ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿ, ಚರಂಡಿ, ಕೆರೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಸುಮಾರು ₹ 838 ಕೋಟಿ ಬಿಡುಗಡೆಯಾಗಿದೆ. ಈ ಕಾಮಗಾರಿಗಳ ಪೈಕಿ ಶೇಕಡ 25ರಷ್ಟು ಕಾಮಗಾರಿಯೂ ನಡೆದಿಲ್ಲ. ಸರ್ಕಾರದಿಂದ ಬಿಡುಗಡೆಯಾದ ಹಣವನ್ನು ಸ್ಥಳೀಯ ಶಾಸಕರ ಹಿಂಬಾಲಕರು, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್. ರಮೇಶ್ ಆರೋಪಿಸಿದರು.</p>.<p>ತಾಲ್ಲೂಕಿನ ಚಂದಾಪುರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅವ್ಯವಹಾರ ಸಂಬಂಧ ಸುಮಾರು 5,700 ಪುಟಗಳ ದಾಖಲೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>ಆನೇಕಲ್ ಯೋಜನಾ ಪ್ರಾಧಿಕಾರದಿಂದ 2014-15ರಿಂದ 2019-20ರ ಅವಧಿಯಲ್ಲಿ ಒಟ್ಟು ₹ 576.57 ಕೋಟಿ ಅನುದಾನ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾಗಿದೆ. ಇಷ್ಟೊಂದು ಬೃಹತ್ ಪ್ರಮಾಣದ ಹಣ ವಾಸ್ತವವಾಗಿ ವೆಚ್ಚವಾಗಿದ್ದರೆ ರಸ್ತೆಗಳು ಸಿಂಗಾಪುರದ ರಸ್ತೆಗಳಂತೆ ಕಂಗೊಳಿಸಬೇಕಾಗಿತ್ತು. 227 ತಾಲ್ಲೂಕುಗಳ ಪೈಕಿ ಮಾದರಿ ತಾಲ್ಲೂಕಾಗಬೇಕಾಗಿತ್ತು. ಆದರೆ, ಪ್ರಾಧಿಕಾರದ ಅಧಿಕಾರಿಗಳು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು.</p>.<p>ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದಾಗಿ ಹೇಳುವ ಅಧಿಕಾರಿಗಳು ಗುಣಮಟ್ಟ ನಿಯಂತ್ರಣ ಇಲಾಖೆಯಿಂದ ಯಾವುದೇ ಕಾಮಗಾರಿಗೂ ದೃಢೀಕರಣ ಪತ್ರ ಪಡೆದಿಲ್ಲ. ಶೇಕಡ 75ರಷ್ಟು ಅನುದಾನ ದೋಚಲಾಗಿದೆ ಎಂದು ವಿವರಿಸಿದರು.</p>.<p>ತಾಲ್ಲೂಕಿನ 69 ಕೆರೆಗಳಿಗೆ ನೀರು ತುಂಬುವ ಸುಮಾರು ₹ 260.61ಕೋಟಿ ಮೊತ್ತದ ಕಾಮಗಾರಿಗಳಲ್ಲೂ ಅವ್ಯವಹಾರ ನಡೆದಿದೆ. ಟೆಂಡರ್ ಪಡೆದಿರುವ ಮೇಘ ಎಂಜಿನಿಯರಿಂಗ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಸಂಸ್ಥೆಯು ಟೆಂಡರ್ ನಿಯಮದಂತೆ ಮಳೆಗಾಲವೂ ಸೇರಿದಂತೆ 15 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ, 41 ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ದೂರಿದರು.</p>.<p>ಅತ್ತಿಬೆಲೆ ಮಂಡಲ ಬಿಜೆಪಿ ಅಧ್ಯಕ್ಷ ಎಸ್.ಆರ್.ಟಿ. ಅಶೋಕ್, ಮುಖಂಡ ಎನ್. ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>