<p><strong>ವಿಜಯಪುರ:</strong> ಪೂರ್ವ ಮುಂಗಾರು ಹಂಗಾಮು ಮುಗಿದಿದ್ದು, ರೈತರು ಬಿತ್ತನೆ ಕಾರ್ಯ ತಯಾರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ರಸಗೊಬ್ಬರಗಳ ಅಂಗಡಿಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶನ ಮಾಡಬೇಕು. ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಬಾರದು ಎಂದುಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರೇವಣ್ಣಸಿದ್ದಪ್ಪ ತಿಳಿಸಿದರು.</p>.<p>ನಿಗದಿಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು. ರಸಗೊಬ್ಬರ ಖರೀದಿಸಿದಾಗ ಕಡ್ಡಾಯವಾಗಿ ಬಿಲ್ ಪಡೆಯಬೇಕು.ಅಂಗಡಿಗಳ ಬಳಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು. ಮಾಸ್ಕ್ ಧರಿಸಿರಬೇಕು. ಅಂತರ ಕಾಪಾಡಿಕೊಳ್ಳಬೇಕು. ಹೆಚ್ಚು ಜನಸಂದಣಿ ಇರದಂತೆ ಗಮನಹರಿಸಬೇಕು ಎಂದು ವ್ಯಾಪಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.</p>.<p>ವಿಜಯಪುರದಲ್ಲಿ 10 ರಸಗೊಬ್ಬರ ಮಾರಾಟದ ಅಂಗಡಿಗಳು ವೆಂಕಟಗಿರಿಕೋಟೆಯಲ್ಲಿ ಒಂದು ಇದೆ. ರೈತರಿಗೆ ರಸಗೊಬ್ಬರ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಪೂರ್ವ ಮುಂಗಾರು ಹಂಗಾಮು ಮುಗಿದಿದ್ದು, ರೈತರು ಬಿತ್ತನೆ ಕಾರ್ಯ ತಯಾರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ರಸಗೊಬ್ಬರಗಳ ಅಂಗಡಿಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶನ ಮಾಡಬೇಕು. ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಬಾರದು ಎಂದುಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರೇವಣ್ಣಸಿದ್ದಪ್ಪ ತಿಳಿಸಿದರು.</p>.<p>ನಿಗದಿಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು. ರಸಗೊಬ್ಬರ ಖರೀದಿಸಿದಾಗ ಕಡ್ಡಾಯವಾಗಿ ಬಿಲ್ ಪಡೆಯಬೇಕು.ಅಂಗಡಿಗಳ ಬಳಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು. ಮಾಸ್ಕ್ ಧರಿಸಿರಬೇಕು. ಅಂತರ ಕಾಪಾಡಿಕೊಳ್ಳಬೇಕು. ಹೆಚ್ಚು ಜನಸಂದಣಿ ಇರದಂತೆ ಗಮನಹರಿಸಬೇಕು ಎಂದು ವ್ಯಾಪಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.</p>.<p>ವಿಜಯಪುರದಲ್ಲಿ 10 ರಸಗೊಬ್ಬರ ಮಾರಾಟದ ಅಂಗಡಿಗಳು ವೆಂಕಟಗಿರಿಕೋಟೆಯಲ್ಲಿ ಒಂದು ಇದೆ. ರೈತರಿಗೆ ರಸಗೊಬ್ಬರ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>