<p><strong>ಸೂಲಿಬೆಲೆ:</strong> ‘ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ ಒಂದರಂತೆ ಕಲ್ಯಾಣಿ ಅಥವಾ ಕುಂಟೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದೊಂದಿಗೆ 14 ಕಡೆ ಕಾಮಗಾರಿಗಳನ್ನು ಆರಂಭಿಸಲಾಗಿದೆ’ ಎಂದು ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಹೇಳಿದರು.</p>.<p>ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿ ಸೋಮೇಶ್ವರ ದೇವಾಲಯದ ಕಲ್ಯಾಣಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p>.<p>‘ಜಲ ಸಂರಕ್ಷಣೆಯ ಈ ಕಾರ್ಯದಲ್ಲಿ ಜನರ ಸಹಭಾಗಿತ್ವ ಹೆಚ್ಚಿದಷ್ಟು ಜಲಮೂಲ ಸಂರಕ್ಷಣೆ ಸಾಧ್ಯ. ಈ ಕುರಿತು ಅರಿವು ಮೂಡಿಸುವ ಹಾಗೂ ಮುಂದಿನ ತಲೆಮಾರಿನವರಿಗೆ ಶುದ್ಧ ಜಲಮೂಲ ಉಳಿಸುವ ಪ್ರಯತ್ನ ನಡೆದಿದೆ’ ಎಂದರು.</p>.<p>‘ಪೂರ್ವಜರು ನಿರ್ಮಿಸಿರುವ, ನಶಿಸುವ ಹಂತದಲ್ಲಿರುವ ಸಾಂಪ್ರದಾಯಿಕ ಕೆರೆ, ಕಟ್ಟೆ, ಕಲ್ಯಾಣಿ, ಕುಂಟೆಗಳನ್ನು ಸಂರಕ್ಷಿಸುವ ಉದ್ದೇಶದಿಂದ ಜಲಾಮೃತ ಪರಿಕಲ್ಪನೆಯಡಿ ಶ್ರಮದಾನ ಮತ್ತು ಇತರ ಯೋಜನೆಗಳನ್ನು ಒಗ್ಗೂಡಿಸಿ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಅಂತರ ಕಾಯ್ದುಕೊಂಡು, ಕೊರೊನಾ ತಡೆಗಟ್ಟಲು ಸರ್ಕಾರ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸಲಾಗಿದೆ. ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡಲು ಮುಂದೆ ಬರುವ ಅರ್ಹ ಕುಟುಂಬಗಳಿಗೆ ಕೆಲಸ ದೊರೆಯುವಂತೆ ಮಾಡಲಾಗುವುದು. ಯೋಜನೆಯ ಪ್ರಯೋಜನವನ್ನು ಪಡದುಕೊಳ್ಳಬೇಕು’ ಎಂದು ಅವರು ಕೋರಿದರು.</p>.<p>ತಾವರೆಕೆರೆ ಗ್ರಾಮ ಪಂಚಾಯಿತಿ ಪಿಡಿಒ ಸುಂದರ್ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ:</strong> ‘ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ ಒಂದರಂತೆ ಕಲ್ಯಾಣಿ ಅಥವಾ ಕುಂಟೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದೊಂದಿಗೆ 14 ಕಡೆ ಕಾಮಗಾರಿಗಳನ್ನು ಆರಂಭಿಸಲಾಗಿದೆ’ ಎಂದು ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಹೇಳಿದರು.</p>.<p>ತಾವರೆಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿ ಸೋಮೇಶ್ವರ ದೇವಾಲಯದ ಕಲ್ಯಾಣಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.</p>.<p>‘ಜಲ ಸಂರಕ್ಷಣೆಯ ಈ ಕಾರ್ಯದಲ್ಲಿ ಜನರ ಸಹಭಾಗಿತ್ವ ಹೆಚ್ಚಿದಷ್ಟು ಜಲಮೂಲ ಸಂರಕ್ಷಣೆ ಸಾಧ್ಯ. ಈ ಕುರಿತು ಅರಿವು ಮೂಡಿಸುವ ಹಾಗೂ ಮುಂದಿನ ತಲೆಮಾರಿನವರಿಗೆ ಶುದ್ಧ ಜಲಮೂಲ ಉಳಿಸುವ ಪ್ರಯತ್ನ ನಡೆದಿದೆ’ ಎಂದರು.</p>.<p>‘ಪೂರ್ವಜರು ನಿರ್ಮಿಸಿರುವ, ನಶಿಸುವ ಹಂತದಲ್ಲಿರುವ ಸಾಂಪ್ರದಾಯಿಕ ಕೆರೆ, ಕಟ್ಟೆ, ಕಲ್ಯಾಣಿ, ಕುಂಟೆಗಳನ್ನು ಸಂರಕ್ಷಿಸುವ ಉದ್ದೇಶದಿಂದ ಜಲಾಮೃತ ಪರಿಕಲ್ಪನೆಯಡಿ ಶ್ರಮದಾನ ಮತ್ತು ಇತರ ಯೋಜನೆಗಳನ್ನು ಒಗ್ಗೂಡಿಸಿ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ಅಂತರ ಕಾಯ್ದುಕೊಂಡು, ಕೊರೊನಾ ತಡೆಗಟ್ಟಲು ಸರ್ಕಾರ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಕಾಮಗಾರಿ ಆರಂಭಿಸಲಾಗಿದೆ. ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡಲು ಮುಂದೆ ಬರುವ ಅರ್ಹ ಕುಟುಂಬಗಳಿಗೆ ಕೆಲಸ ದೊರೆಯುವಂತೆ ಮಾಡಲಾಗುವುದು. ಯೋಜನೆಯ ಪ್ರಯೋಜನವನ್ನು ಪಡದುಕೊಳ್ಳಬೇಕು’ ಎಂದು ಅವರು ಕೋರಿದರು.</p>.<p>ತಾವರೆಕೆರೆ ಗ್ರಾಮ ಪಂಚಾಯಿತಿ ಪಿಡಿಒ ಸುಂದರ್ ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>