<p><strong>ಸೂಲಿಬೆಲೆ(ಹೊಸಕೋಟೆ)</strong>: ಗ್ರಾಮೀಣ ಪ್ರತಿಭಾವಂತ ಮಕ್ಕಳಿಗೆ ಸಹಾಯಾದ ಹಸ್ತಬೇಕಿದೆ. ಬಾಲೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಕಲಿಕೆಯಲ್ಲಿ ಮುಂದಿರುವ ಬಡ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ತಗಲುವ ವೆಚ್ಚವನ್ನು ಪರಿಗ್ರಹ ಟ್ರಸ್ಟ್ ಭರಿಸಲಿದೆ ಎಂದು ಬೆಂಗಳೂರಿನ ಪರಿಗ್ರಹ ಟ್ರಸ್ಟ್ ಸಂಸ್ಥಾಪಕ ಸುನಿಲ್ ಕುಮಾರ್ ತಿಳಿಸಿದರು.</p>.<p>ಹೋಬಳಿಯ ಬಾಲೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ಟ್ರ್ಯಾಕ್ಸೂಟ್ ಮತ್ತು ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದರು.</p>.<p>‘ನಾವೆಲ್ಲ ಇಂದು ಲಕ್ಷ ಲಕ್ಷ ವೇತನ ಪಡೆಯುತ್ತಿದ್ದೇವೆ ಎಂದರೆ ಅದಕ್ಕೆ ಸರ್ಕಾರಿ ಶಾಲೆಗಳಲ್ಲಿ ನಮಗೆ ಸಿಕ್ಕ ಮೌಲ್ಯಗಳ ಬುನಾದಿಯೇ ಕಾರಣ. ಇಂದಿಗೂ ಅಂಕಿ ಸಂಖ್ಯೆಗಳನ್ನು ತೆಗೆದು ನೋಡಿ ದೇಶದಲ್ಲಿ ಬಹುತೇಕ ಉದ್ಯೋಗಿಗಳು ಸರ್ಕಾರಿ ಶಾಲೆಯಲ್ಲಿ ಓದಿರುವವರೇ ಇದ್ದಾರೆ’ ಎಂದರು.</p>.<p>ಶಿಕ್ಷಕರ ಮನವಿಗೆ ಸ್ಪಂದಿಸಿ ನಲಿ ಕಲಿ ಟೇಬಲ್ ಮತ್ತು ಕುರ್ಚಿ ಖರೀದಿಗೆ ತಗುಲುವ ವೆಚ್ಚ ಭರಿಸುವುದಾಗಿಯೂ, ಪ್ರತಿ ವರ್ಷ ಇನ್ನೂ ಮುಂದೆ ಮಕ್ಕಳ ಕಲಿಕೆಗೆ ಪೂರಕವಾದ ಕಲಿಕಾ ಪರಿಕರ ನೀಡುವುದಾಗಿ ಭರವಸೆ ನೀಡಿದರು.</p>.<p>ಬಾಲೇನಹಳ್ಳಿ ಗ್ರಾಮದ ಉಪನ್ಯಾಸಕ ಡಾ.ಚನ್ನಕೃಷ್ಣಪ್ಪ ಮಾತನಾಡಿದರು. ಎಸ್ಡಿಎಂಸಿ ಸದಸ್ಯರಾದ ಸುರೇಶ್, ಪರಿಗ್ರಹ ಟ್ರಸ್ಟ್ ಕಾರ್ಯದರ್ಶಿ ಗುರುಮಲ್ಲೇಶ್, ಪದಾಧಿಕಾರಿಗಳಾದ ಅಶೋಕ್, ವಿನೋದ್ ಕುಮಾರ್, ಮುಖ್ಯ ಶಿಕ್ಷಕರಾದ ವೆಂಕಟೇಶ್, ಶಿಕ್ಷಕಿ ಸೌಭಾಗ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ(ಹೊಸಕೋಟೆ)</strong>: ಗ್ರಾಮೀಣ ಪ್ರತಿಭಾವಂತ ಮಕ್ಕಳಿಗೆ ಸಹಾಯಾದ ಹಸ್ತಬೇಕಿದೆ. ಬಾಲೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಕಲಿಕೆಯಲ್ಲಿ ಮುಂದಿರುವ ಬಡ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ತಗಲುವ ವೆಚ್ಚವನ್ನು ಪರಿಗ್ರಹ ಟ್ರಸ್ಟ್ ಭರಿಸಲಿದೆ ಎಂದು ಬೆಂಗಳೂರಿನ ಪರಿಗ್ರಹ ಟ್ರಸ್ಟ್ ಸಂಸ್ಥಾಪಕ ಸುನಿಲ್ ಕುಮಾರ್ ತಿಳಿಸಿದರು.</p>.<p>ಹೋಬಳಿಯ ಬಾಲೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಟ್ರಸ್ಟ್ ವತಿಯಿಂದ ಟ್ರ್ಯಾಕ್ಸೂಟ್ ಮತ್ತು ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದರು.</p>.<p>‘ನಾವೆಲ್ಲ ಇಂದು ಲಕ್ಷ ಲಕ್ಷ ವೇತನ ಪಡೆಯುತ್ತಿದ್ದೇವೆ ಎಂದರೆ ಅದಕ್ಕೆ ಸರ್ಕಾರಿ ಶಾಲೆಗಳಲ್ಲಿ ನಮಗೆ ಸಿಕ್ಕ ಮೌಲ್ಯಗಳ ಬುನಾದಿಯೇ ಕಾರಣ. ಇಂದಿಗೂ ಅಂಕಿ ಸಂಖ್ಯೆಗಳನ್ನು ತೆಗೆದು ನೋಡಿ ದೇಶದಲ್ಲಿ ಬಹುತೇಕ ಉದ್ಯೋಗಿಗಳು ಸರ್ಕಾರಿ ಶಾಲೆಯಲ್ಲಿ ಓದಿರುವವರೇ ಇದ್ದಾರೆ’ ಎಂದರು.</p>.<p>ಶಿಕ್ಷಕರ ಮನವಿಗೆ ಸ್ಪಂದಿಸಿ ನಲಿ ಕಲಿ ಟೇಬಲ್ ಮತ್ತು ಕುರ್ಚಿ ಖರೀದಿಗೆ ತಗುಲುವ ವೆಚ್ಚ ಭರಿಸುವುದಾಗಿಯೂ, ಪ್ರತಿ ವರ್ಷ ಇನ್ನೂ ಮುಂದೆ ಮಕ್ಕಳ ಕಲಿಕೆಗೆ ಪೂರಕವಾದ ಕಲಿಕಾ ಪರಿಕರ ನೀಡುವುದಾಗಿ ಭರವಸೆ ನೀಡಿದರು.</p>.<p>ಬಾಲೇನಹಳ್ಳಿ ಗ್ರಾಮದ ಉಪನ್ಯಾಸಕ ಡಾ.ಚನ್ನಕೃಷ್ಣಪ್ಪ ಮಾತನಾಡಿದರು. ಎಸ್ಡಿಎಂಸಿ ಸದಸ್ಯರಾದ ಸುರೇಶ್, ಪರಿಗ್ರಹ ಟ್ರಸ್ಟ್ ಕಾರ್ಯದರ್ಶಿ ಗುರುಮಲ್ಲೇಶ್, ಪದಾಧಿಕಾರಿಗಳಾದ ಅಶೋಕ್, ವಿನೋದ್ ಕುಮಾರ್, ಮುಖ್ಯ ಶಿಕ್ಷಕರಾದ ವೆಂಕಟೇಶ್, ಶಿಕ್ಷಕಿ ಸೌಭಾಗ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>